ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗೃಹಿಣಿ ಆತ್ಮಹತ್ಯೆ: ವರದಕ್ಷಿಣೆ ಕಿರುಕುಳ– ದೂರು

Last Updated 21 ಆಗಸ್ಟ್ 2020, 9:10 IST
ಅಕ್ಷರ ಗಾತ್ರ

ಪಿರಿಯಾಪಟ್ಟಣ: ವರದಕ್ಷಿಣೆ ಕಿರುಕುಳಕ್ಕೆ ಗೃಹಿಣಿಯೊಬ್ಬಳು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಪಟ್ಟಣದ ಗೊಲ್ಲರ ಬೀದಿಯಲ್ಲಿ ಗುರುವಾರ ನಡೆದಿದೆ.

ನಿಶಾ (24) ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ. 4 ವರ್ಷಗಳ ಹಿಂದೆ ಪಟ್ಟಣದ ವರ್ತಕ ಜಯಶೀಲ ಅವರ ಪುತ್ರ ಪ್ರದೀಪ್ ಅವರೊಂದಿಗೆ ವಿವಾಹವಾಗಿತ್ತು.

ಗಂಡನ ಮನೆಯವರು ಪದೇ ಪದೇ ಹಣಕ್ಕಾಗಿ ಪೀಡಿಸುತ್ತಿದ್ದರಿಂದ ಮನನೊಂದು ಮಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಪೋಷಕರು ಪಟ್ಟಣದ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ಪತಿ ಪ್ರದೀಪ್, ಮಾವ ಜಯಶೀಲ, ಅತ್ತೆ ಇಂದಿರಾ, ಮಗಳು ಸೌಮ್ಯ ವಿರುದ್ದ ಪ್ರಕರಣ ದಾಖಲಿಸಲಾಗಿದೆ.

ಮನೆಯ ಸುತ್ತ ಜನ ಸೇರಿದ್ದರಿಂದ ಸಿಪಿಐ ಬಿ.ಆರ್ ಪ್ರದೀಪ್, ಹುಣಸೂರು ಸಿಪಿಐ ಪೂವಯ್ಯ ನೇತೃತ್ವದಲ್ಲಿ ಪೊಲೀಸರು ಸೂಕ್ತ ಬಂದೋಬಸ್ತ್ ಕೈಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT