<p><strong>ಮೈಸೂರು:</strong> ಸಾಲ ಕೊಡಿಸುವುದಾಗಿ ಮುಂಗಡ ಪಡೆದಿದ್ದ ವ್ಯಕ್ತಿಯೊಬ್ಬ, ಹಣ ಕೊಟ್ಟವರ ಒತ್ತಡ ಸಹಿಸಲಾಗದೆ ನಗರದ ಜಿಲ್ಲಾಧಿಕಾರಿ ಕಚೇರಿ ಬಳಿಯ ಉದ್ಯಾನದಲ್ಲಿ ಮಂಗಳವಾರ ಚಾಕು ಇರಿದುಕೊಂಡು ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನಿಸಿದರು.</p>.<p>ಮಂಡಿಮೊಹಲ್ಲಾದ ರಾಧಾಕೃಷ್ಣ (55) ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ.</p>.<p>ತಕ್ಷಣ ಸ್ಥಳದಲ್ಲಿದ್ದ ಪೊಲೀಸರು ರಾಧಾಕೃಷ್ಣನನ್ನು ಕೆ.ಆರ್.ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದರು. ಒಂದೂವರೆ ಇಂಚಿನಷ್ಟು ಆಳದ ಗಾಯವಾಗಿದೆ ಎಂದು ಮಾಹಿತಿ ನೀಡಿದರು.</p>.<p>ಪ್ರಧಾನಮಂತ್ರಿ ರೋಜಗಾರ್ ಯೋಜನೆಯಡಿ ಸಾಲ ಕೊಡಿಸುತ್ತೇನೆಂದು ಹೇಳಿ ರಾಧಾಕೃಷ್ಣ ಕೆಲವರಿಂದ ಮುಂಗಡವಾಗಿ ಹಣ ಪಡೆದಿದ್ದರು. ಕೋವಿಡ್ನಿಂದ ಬ್ಯಾಂಕ್ಗಳಲ್ಲಿ ಸಕಾಲಕ್ಕೆ ಸಾಲ ಮಂಜೂರಾಗಿರಲಿಲ್ಲ.</p>.<p>ಹಣ ಕೊಟ್ಟವರು ವಾಪಸ್ ನೀಡುವಂತೆ ನಿತ್ಯವೂ ಕೇಳಿದ್ದಾರೆ. ಎಂದಿನಂತೆ ಜಿಲ್ಲಾಧಿಕಾರಿ ಕಚೇರಿ ಬಳಿಯ ಉದ್ಯಾನದಲ್ಲಿದ್ದ ಸಂದರ್ಭ, ಹಣ ಕೊಟ್ಟವರು ಬಂದು ಕೊಟ್ಟ ದುಡ್ಡು ಮರಳಿಸುವಂತೆ ಒತ್ತಾಯಿಸಿದ್ದಾರೆ.</p>.<p>ಒತ್ತಡ ತಾಳಲಾರದ ರಾಧಾಕೃಷ್ಣ ಮೂತ್ರ ವಿಸರ್ಜಿಸಿ ಬರುವೆ ಎಂದು ಉದ್ಯಾನದ ಬೇಲಿ ಬದಿಗೆ ತೆರಳಿ ಚಾಕುವಿನಿಂದ ಚುಚ್ಚಿಕೊಂಡು ಗಾಯಗೊಂಡಿದ್ದಾರೆ. ಈತನ ವಿರುದ್ಧ ಆತ್ಮಹತ್ಯೆ ಯತ್ನ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಲಕ್ಷ್ಮೀಪುರಂ ಪೊಲೀಸರು ‘ಪ್ರಜಾವಾಣಿ’ಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ಸಾಲ ಕೊಡಿಸುವುದಾಗಿ ಮುಂಗಡ ಪಡೆದಿದ್ದ ವ್ಯಕ್ತಿಯೊಬ್ಬ, ಹಣ ಕೊಟ್ಟವರ ಒತ್ತಡ ಸಹಿಸಲಾಗದೆ ನಗರದ ಜಿಲ್ಲಾಧಿಕಾರಿ ಕಚೇರಿ ಬಳಿಯ ಉದ್ಯಾನದಲ್ಲಿ ಮಂಗಳವಾರ ಚಾಕು ಇರಿದುಕೊಂಡು ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನಿಸಿದರು.</p>.<p>ಮಂಡಿಮೊಹಲ್ಲಾದ ರಾಧಾಕೃಷ್ಣ (55) ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ.</p>.<p>ತಕ್ಷಣ ಸ್ಥಳದಲ್ಲಿದ್ದ ಪೊಲೀಸರು ರಾಧಾಕೃಷ್ಣನನ್ನು ಕೆ.ಆರ್.ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದರು. ಒಂದೂವರೆ ಇಂಚಿನಷ್ಟು ಆಳದ ಗಾಯವಾಗಿದೆ ಎಂದು ಮಾಹಿತಿ ನೀಡಿದರು.</p>.<p>ಪ್ರಧಾನಮಂತ್ರಿ ರೋಜಗಾರ್ ಯೋಜನೆಯಡಿ ಸಾಲ ಕೊಡಿಸುತ್ತೇನೆಂದು ಹೇಳಿ ರಾಧಾಕೃಷ್ಣ ಕೆಲವರಿಂದ ಮುಂಗಡವಾಗಿ ಹಣ ಪಡೆದಿದ್ದರು. ಕೋವಿಡ್ನಿಂದ ಬ್ಯಾಂಕ್ಗಳಲ್ಲಿ ಸಕಾಲಕ್ಕೆ ಸಾಲ ಮಂಜೂರಾಗಿರಲಿಲ್ಲ.</p>.<p>ಹಣ ಕೊಟ್ಟವರು ವಾಪಸ್ ನೀಡುವಂತೆ ನಿತ್ಯವೂ ಕೇಳಿದ್ದಾರೆ. ಎಂದಿನಂತೆ ಜಿಲ್ಲಾಧಿಕಾರಿ ಕಚೇರಿ ಬಳಿಯ ಉದ್ಯಾನದಲ್ಲಿದ್ದ ಸಂದರ್ಭ, ಹಣ ಕೊಟ್ಟವರು ಬಂದು ಕೊಟ್ಟ ದುಡ್ಡು ಮರಳಿಸುವಂತೆ ಒತ್ತಾಯಿಸಿದ್ದಾರೆ.</p>.<p>ಒತ್ತಡ ತಾಳಲಾರದ ರಾಧಾಕೃಷ್ಣ ಮೂತ್ರ ವಿಸರ್ಜಿಸಿ ಬರುವೆ ಎಂದು ಉದ್ಯಾನದ ಬೇಲಿ ಬದಿಗೆ ತೆರಳಿ ಚಾಕುವಿನಿಂದ ಚುಚ್ಚಿಕೊಂಡು ಗಾಯಗೊಂಡಿದ್ದಾರೆ. ಈತನ ವಿರುದ್ಧ ಆತ್ಮಹತ್ಯೆ ಯತ್ನ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಲಕ್ಷ್ಮೀಪುರಂ ಪೊಲೀಸರು ‘ಪ್ರಜಾವಾಣಿ’ಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>