‘ಪಿರಿಯಾಪಟ್ಟಣ ತಾಲ್ಲೂಕಿನ ಬೆಟ್ಟದಪುರ ಹೋಬಳಿಯ ಭುವನಹಳ್ಳಿ, ಜೋಗನಹಳ್ಳಿ, ಸಾಲುಕೊಪ್ಪಲು, ಕೊಣಸೂರು ಸೇರಿದಂತೆ ಇನ್ನಿತರೆ ಗ್ರಾಮಗಳಲ್ಲಿ ಇದೇ ಬ್ಯಾಚ್ನ ರಸಗೊಬ್ಬರವನ್ನು ರೈತರು ಬಳಸಿದ್ದು, ಈ ಎಲ್ಲರ ಬೆಳೆ ಹಾನಿಗೊಳಗಾಗಿದೆ. ಇದಕ್ಕೆ ಪರಿಹಾರ ನೀಡುವಂತೆ ಕೋರಿ ತಂಬಾಕು ಮಂಡಳಿ, ತಹಶೀಲ್ದಾರ್ ಕಚೇರಿ, ಕೃಷಿ ಇಲಾಖೆಗೆ ಎಡ ತಾಕಿದರೂ ಅಧಿಕಾರಿಗಳು ಅಲ್ಲಿಗೋಗಿ, ಇಲ್ಲಿಗೋಗಿ ಎಂದು ಸತಾಯಿಸುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ನಾವೆಲ್ಲಿಗೆ ಹೋಗಬೇಕು ?’ ಎಂದು ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್ಎಸ್)ಯ ರೈತ ಘಟಕದ ಅಧ್ಯಕ್ಷ ಜೋಗನಹಳ್ಳಿ ಗುರುಮೂರ್ತಿ ಅಸಮಾಧಾನ ವ್ಯಕ್ತಪಡಿಸಿದರು.