ಶಿವರಾಜ್ ಅವರಿಗೆ ಮುಂದಿನ ವಾರ ನಿಶ್ಚಿತಾರ್ಥ ಮಾಡಲು ತಯಾರಿ ನಡೆಸಲಾಗಿತ್ತು. ಗುರುವಾರ ರಾತ್ರಿ 7 ಗಂಟೆ ಸುಮಾರಿಗೆ ಅಣ್ಣನ ಮಕ್ಕಳಿಗೆ ಬಿಸ್ಕತ್ತು ತಂದುಕೊಟ್ಟ ಅವರು ಮನೆಯಿಂದ ಹೊರಗೆ ಹೋಗಿದ್ದರು. ರಾತ್ರಿ ಹತ್ತು ಗಂಟೆಯಾದರೂ ಮನೆಗೆ ಬಂದಿರಲಿಲ್ಲ. ಆತಂಕಗೊಂಡ ಕುಟುಂಬಸ್ಥರು ಹುಡುಕಾಟ ನಡೆಸುತ್ತಿದ್ದಾಗ, ಗ್ರಾಮದ ಹೊರಗಡೆ ಇರುವ ಆಲದ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ ಎಂದು ವರುಣಾ ಪೊಲೀಸ್ ಠಾಣೆ ಎಸ್ಐ ಲೋಲಾಕ್ಷಿ ತಿಳಿಸಿದ್ದಾರೆ.