<p><strong>ಮೈಸೂರು:</strong> ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮಮಂದಿರವು ದೇಶದ ಐತಿಹಾಸಿಕ ಹಾಗೂ ಸಾಂಸ್ಕೃತಿಕ ಕೇಂದ್ರವಾಗಿ ರೂಪುಗೊಳ್ಳಲಿ ಎಂದು ಸುತ್ತೂರು ಮಠದ ಶಿವರಾತ್ರಿದೇಶಿಕೇಂದ್ರ ಸ್ವಾಮೀಜಿ ತಮ್ಮ ವಿಡಿಯೊ ಸಂದೇಶದಲ್ಲಿ ತಿಳಿಸಿದ್ದಾರೆ.</p>.<p>‘ರಾಮಮಂದಿರಕ್ಕೆ ಭೂಮಿಪೂಜೆ ನೆರವೇರಿಸುತ್ತಿರುವುದು ಸಂತಸದ ಸಂಗತಿ. ಇದು ನಿಗದಿತ ಅವಧಿಯಲ್ಲಿ ಪೂರ್ಣಗೊಳ್ಳಲಿ ಎಂದು ಎಲ್ಲ ಜನರು ಕೋವಿಡ್ ಕಾರಣದಿಂದ ಮನೆಯಲ್ಲೇ ಇದ್ದು ಪ್ರಾರ್ಥಿಸಬೇಕು. ನಾನೂ ಇದೇ ಕಾರಣಕ್ಕೆ ಅಯೋಧ್ಯೆಗೆ ಹೋಗಲಾಗುತ್ತಿಲ್ಲ’ ಎಂದು ಅವರು ಹೇಳಿದ್ದಾರೆ.</p>.<p>ರಾಮ ಈ ದೇಶದ ಮಹಾಪುರುಷರಾಗಿ, ಸಂಸ್ಕೃತಿಯ ಉತ್ತರಾಧಿಕಾರಿಯಾಗಿದ್ದವರು. ಅವರ ಜನ್ಮಸ್ಥಳದಲ್ಲಿ ಅವರ ಸ್ಮರಣೆಗಾಗಿ ನಡೆಯುವ ಕಾರ್ಯಕ್ರಮವು ದೇಶದ ಸಮಸ್ತ ಜನರ ಆಶಯವಾಗಿತ್ತು. ಸುಪ್ರೀಂಕೋರ್ಟ್ನ ಸರ್ವಸಮ್ಮತವಾದ ತೀರ್ಪಿನಿಂದ ಸಂತಸ, ಸಂಭ್ರಮಗಳು ಬಂದಿದೆ. ದೇಶದ ಜನರು ಮಾನಸಿಕವಾಗಿ ಸಡಗರದಲ್ಲಿ ತೊಡಗಿಸಿಕೊಂಡಿದ್ದಾರೆ.</p>.<p>ದೇಶವನ್ನು ರಾಮರಾಜ್ಯ ಮಾಡುವ ಕನಸನ್ನು ನನಸಾಗಿಸಲು ಅಹರ್ನಿಷಿ ತೊಡಗಿಸಿಕೊಂಡಿರುವ ನರೇಂದ್ರ ಮೋದಿ ಅವರೇ ಈ ಕಾರ್ಯ ನೆರವೇರಿಸುತ್ತಿರುವುದು ಯೋಗಾಯೋಗ ಎಂದು ಭಾವಿಸಬೇಕು ಎಂದು ಅವರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮಮಂದಿರವು ದೇಶದ ಐತಿಹಾಸಿಕ ಹಾಗೂ ಸಾಂಸ್ಕೃತಿಕ ಕೇಂದ್ರವಾಗಿ ರೂಪುಗೊಳ್ಳಲಿ ಎಂದು ಸುತ್ತೂರು ಮಠದ ಶಿವರಾತ್ರಿದೇಶಿಕೇಂದ್ರ ಸ್ವಾಮೀಜಿ ತಮ್ಮ ವಿಡಿಯೊ ಸಂದೇಶದಲ್ಲಿ ತಿಳಿಸಿದ್ದಾರೆ.</p>.<p>‘ರಾಮಮಂದಿರಕ್ಕೆ ಭೂಮಿಪೂಜೆ ನೆರವೇರಿಸುತ್ತಿರುವುದು ಸಂತಸದ ಸಂಗತಿ. ಇದು ನಿಗದಿತ ಅವಧಿಯಲ್ಲಿ ಪೂರ್ಣಗೊಳ್ಳಲಿ ಎಂದು ಎಲ್ಲ ಜನರು ಕೋವಿಡ್ ಕಾರಣದಿಂದ ಮನೆಯಲ್ಲೇ ಇದ್ದು ಪ್ರಾರ್ಥಿಸಬೇಕು. ನಾನೂ ಇದೇ ಕಾರಣಕ್ಕೆ ಅಯೋಧ್ಯೆಗೆ ಹೋಗಲಾಗುತ್ತಿಲ್ಲ’ ಎಂದು ಅವರು ಹೇಳಿದ್ದಾರೆ.</p>.<p>ರಾಮ ಈ ದೇಶದ ಮಹಾಪುರುಷರಾಗಿ, ಸಂಸ್ಕೃತಿಯ ಉತ್ತರಾಧಿಕಾರಿಯಾಗಿದ್ದವರು. ಅವರ ಜನ್ಮಸ್ಥಳದಲ್ಲಿ ಅವರ ಸ್ಮರಣೆಗಾಗಿ ನಡೆಯುವ ಕಾರ್ಯಕ್ರಮವು ದೇಶದ ಸಮಸ್ತ ಜನರ ಆಶಯವಾಗಿತ್ತು. ಸುಪ್ರೀಂಕೋರ್ಟ್ನ ಸರ್ವಸಮ್ಮತವಾದ ತೀರ್ಪಿನಿಂದ ಸಂತಸ, ಸಂಭ್ರಮಗಳು ಬಂದಿದೆ. ದೇಶದ ಜನರು ಮಾನಸಿಕವಾಗಿ ಸಡಗರದಲ್ಲಿ ತೊಡಗಿಸಿಕೊಂಡಿದ್ದಾರೆ.</p>.<p>ದೇಶವನ್ನು ರಾಮರಾಜ್ಯ ಮಾಡುವ ಕನಸನ್ನು ನನಸಾಗಿಸಲು ಅಹರ್ನಿಷಿ ತೊಡಗಿಸಿಕೊಂಡಿರುವ ನರೇಂದ್ರ ಮೋದಿ ಅವರೇ ಈ ಕಾರ್ಯ ನೆರವೇರಿಸುತ್ತಿರುವುದು ಯೋಗಾಯೋಗ ಎಂದು ಭಾವಿಸಬೇಕು ಎಂದು ಅವರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>