<p><strong>ಮೈಸೂರು</strong>: ಒಳಚರಂಡಿ ಪೌರಕಾರ್ಮಿಕರನ್ನು ಕಾಯಂಗೊಳಿಸುವ ಕುರಿತು ಸರ್ಕಾರದ ಮಟ್ಟದಲ್ಲಿ ಪ್ರಯತ್ನಿಸಬೇಕು ಎಂದು ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಅವರು ಸಚಿವ ಎಸ್.ಟಿ.ಸೋಮಶೇಖರ್ ಅವರಿಗೆ ಹೇಳಿದರು.</p>.<p>ಇಲ್ಲಿನ ಶ್ರೀಕೃಷ್ಣಧಾಮದಲ್ಲಿ ಶನಿವಾರ ತಮ್ಮನ್ನು ಭೇಟಿ ಮಾಡಿದ ಅವರೊಂದಿಗೆ ಸುಮಾರು 15 ನಿಮಿಷಗಳ ಕಾಲ ಈ ವಿಷಯ ಕುರಿತು ಚರ್ಚೆ ನಡೆಸಿದರು.</p>.<p>ಈ ಕುರಿತು ಚಾಮುಂಡೇಶ್ವರಿ ಗೆಳೆಯರ ಪ್ರಗತಿಪರ ಸೇವಾ ಪ್ರತಿಷ್ಠಾನದ ಅಧ್ಯಕ್ಷ ಜಿ.ಶ್ರೀನಿವಾಸ್ ಅವರು ನೀಡಿದ ಮನವಿಪತ್ರವನ್ನು ಸ್ವಾಮೀಜಿ ಸಚಿವರಿಗೆ ಕೊಟ್ಟು, ಶೀಘ್ರದಲ್ಲಿ ಕಾಯಂಗೊಳಿಸಲು ಪ್ರಯತ್ನಿಸಬೇಕು ಎಂದರು.</p>.<p>ಪೌರಕಾರ್ಮಿಕರು ವಾಸಿಸುತ್ತಿರುವ ಕೊಳಗೇರಿ ನಿರ್ಮೂಲನಾ ಮಂಡಳಿಯ ಮನೆಗಳಿಗೆ ಖಾತೆ ಮತ್ತು ಕಂದಾಯ ಮಾಡಿಕೊಡಬೇಕೆಂದು ಈ ಸಮಯದಲ್ಲಿ ಸ್ವಾಮೀಜಿ ಗಮನ ಸೆಳೆದರು.</p>.<p>ಖಾತೆ ಮತ್ತು ಕಂದಾಯ ಇಲ್ಲದೇ ಬ್ಯಾಂಕ್ ಸಾಲ ಸಿಕ್ಕುತ್ತಿಲ್ಲ. ಇದರಿಂದ ಪೌರಕಾರ್ಮಿಕರಿಗೆ ತೊಂದರೆಯಾಗಿದೆ. ಶೀಘ್ರದಲ್ಲಿ ಈ ಸಮಸ್ಯೆ ಬಗೆಹರಿಸುವಂತೆ ಶ್ರೀನಿವಾಸ್ ಮನವಿ ಮಾಡಿದರು.</p>.<p>ಮನವಿ ಪತ್ರಗಳನ್ನು ಸ್ವೀಕರಿಸಿದ ಸಚಿವ ಸೋಮಶೇಖರ್ ಈ ಕುರಿತು ಗಮನ ಹರಿಸುವುದಾಗಿ ಭರವಸೆ ನೀಡಿದರು. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಚ್.ವಿ.ರಾಜೀವ್, ಶಾಸಕ ಎಲ್.ನಾಗೇಂದ್ರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ಒಳಚರಂಡಿ ಪೌರಕಾರ್ಮಿಕರನ್ನು ಕಾಯಂಗೊಳಿಸುವ ಕುರಿತು ಸರ್ಕಾರದ ಮಟ್ಟದಲ್ಲಿ ಪ್ರಯತ್ನಿಸಬೇಕು ಎಂದು ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಅವರು ಸಚಿವ ಎಸ್.ಟಿ.ಸೋಮಶೇಖರ್ ಅವರಿಗೆ ಹೇಳಿದರು.</p>.<p>ಇಲ್ಲಿನ ಶ್ರೀಕೃಷ್ಣಧಾಮದಲ್ಲಿ ಶನಿವಾರ ತಮ್ಮನ್ನು ಭೇಟಿ ಮಾಡಿದ ಅವರೊಂದಿಗೆ ಸುಮಾರು 15 ನಿಮಿಷಗಳ ಕಾಲ ಈ ವಿಷಯ ಕುರಿತು ಚರ್ಚೆ ನಡೆಸಿದರು.</p>.<p>ಈ ಕುರಿತು ಚಾಮುಂಡೇಶ್ವರಿ ಗೆಳೆಯರ ಪ್ರಗತಿಪರ ಸೇವಾ ಪ್ರತಿಷ್ಠಾನದ ಅಧ್ಯಕ್ಷ ಜಿ.ಶ್ರೀನಿವಾಸ್ ಅವರು ನೀಡಿದ ಮನವಿಪತ್ರವನ್ನು ಸ್ವಾಮೀಜಿ ಸಚಿವರಿಗೆ ಕೊಟ್ಟು, ಶೀಘ್ರದಲ್ಲಿ ಕಾಯಂಗೊಳಿಸಲು ಪ್ರಯತ್ನಿಸಬೇಕು ಎಂದರು.</p>.<p>ಪೌರಕಾರ್ಮಿಕರು ವಾಸಿಸುತ್ತಿರುವ ಕೊಳಗೇರಿ ನಿರ್ಮೂಲನಾ ಮಂಡಳಿಯ ಮನೆಗಳಿಗೆ ಖಾತೆ ಮತ್ತು ಕಂದಾಯ ಮಾಡಿಕೊಡಬೇಕೆಂದು ಈ ಸಮಯದಲ್ಲಿ ಸ್ವಾಮೀಜಿ ಗಮನ ಸೆಳೆದರು.</p>.<p>ಖಾತೆ ಮತ್ತು ಕಂದಾಯ ಇಲ್ಲದೇ ಬ್ಯಾಂಕ್ ಸಾಲ ಸಿಕ್ಕುತ್ತಿಲ್ಲ. ಇದರಿಂದ ಪೌರಕಾರ್ಮಿಕರಿಗೆ ತೊಂದರೆಯಾಗಿದೆ. ಶೀಘ್ರದಲ್ಲಿ ಈ ಸಮಸ್ಯೆ ಬಗೆಹರಿಸುವಂತೆ ಶ್ರೀನಿವಾಸ್ ಮನವಿ ಮಾಡಿದರು.</p>.<p>ಮನವಿ ಪತ್ರಗಳನ್ನು ಸ್ವೀಕರಿಸಿದ ಸಚಿವ ಸೋಮಶೇಖರ್ ಈ ಕುರಿತು ಗಮನ ಹರಿಸುವುದಾಗಿ ಭರವಸೆ ನೀಡಿದರು. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಚ್.ವಿ.ರಾಜೀವ್, ಶಾಸಕ ಎಲ್.ನಾಗೇಂದ್ರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>