<p><strong>ಮೈಸೂರು: </strong>ಕೇಂದ್ರ ಸರ್ಕಾರದ ಇತ್ತೀಚಿನ ನಡವಳಿಕೆಗಳು ಒಕ್ಕೂಟ ವ್ಯವಸ್ಥೆಯನ್ನು ದುರ್ಬಲಗೊಳಿಸುತ್ತಿವೆ ಎಂದು ಸ್ವರಾಜ್ ಇಂಡಿಯಾ ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಉಗ್ರನರಸಿಂಹೇಗೌಡ ಆತಂಕ ವ್ಯಕ್ತಪಡಿಸಿದರು.</p>.<p>ರಾಜ್ಯ ಸರ್ಕಾರದ ಪಾಲಿನ ಜಿಎಸ್ಟಿ ಪರಿಹಾರ ಮೊತ್ತ ₹ 14 ಸಾವಿರ ಕೊಡದೇ ಸಾಲ ಮಾಡಲು ಕೇಂದ್ರ ಸರ್ಕಾರ ಸೂಚಿಸಿರುವುದು ರಾಜ್ಯದ ಆರ್ಥಿಕ ಸ್ಥಿತಿಗೆ ಗಾಯದ ಮೇಲೆ ಬರೆ ಎಳೆದಂತೆ ಆಗಿದೆ. ರಾಜ್ಯದ ಬಿಜೆಪಿ ಸಂಸದರು ಈ ಕುರಿತು ದನಿ ಎತ್ತುತ್ತಿಲ್ಲ ಎಂದು ಅವರು ಇಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಬೇಸರ ವ್ಯಕ್ತಪಡಿಸಿದರು.</p>.<p>ನಿಜಕ್ಕೂ ಇದು ಒಕ್ಕೂಟ ವ್ಯವಸ್ಥೆಯನ್ನು ದುರ್ಬಲಗೊಳಿಸುವಂತಹ ನಡವಳಿಕೆಯಾಗಿದೆ. ಜನತಂತ್ರ ವ್ಯವಸ್ಥೆಯಲ್ಲಿ ಇದು ಅಪಾಯಕಾರಿ ಬೆಳವಣಿಗೆ ಎಂದು ಅವರು ವಿಶ್ಲೇಷಿಸಿದರು.</p>.<p>ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತುಮಕೂರಿನಲ್ಲಿ ಬಹಿರಂಗವಾಗಿ ಪ್ರಧಾನಿಯವರ ಮುಂದೆಯೇ ₹ 35 ಸಾವಿರ ಕೋಟಿ ಪರಿಹಾರ ಕೊಡಿ ಎಂದು ಕೇಳಿದ್ದಕ್ಕೆ ಕೊಟ್ಟಿದ್ದು ಬರೇ ₹ 4 ಸಾವಿರ ಕೋಟಿ. ಸತತವಾಗಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ರಾಜ್ಯವನ್ನು ನಿರ್ಲಕ್ಷಿಸುತ್ತಿದೆ ಎಂದು ಅವರು ಹರಿಹಾಯ್ದರು.</p>.<p>ಪಕ್ಷದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಪುನೀತ್ ಮಾತನಾಡಿ, ‘ರಾಜ್ಯದ 25 ಸಂಸದರು ತಮ್ಮ ಕಿವಿಯನ್ನು ಕಿವುಡಾಗಿ, ಬಾಯಿಯನ್ನು ಮೂಕವನ್ನಾಗಿಸಿಕೊಂಡಿದ್ದಾರೆ. ರಾಜ್ಯಕ್ಕೆ ಬರಬೇಕಾದ ಪಾಲು ಕೊಡಿ ಎಂದು ಅವರು ಕೇಳುತ್ತಿಲ್ಲ’ ಎಂದು ಕಿಡಿಕಾರಿದರು.</p>.<p>ದೇಶದಲ್ಲಿ ಶರವೇಗದಲ್ಲಿ ಉದ್ಯೋಗ ನಾಶವಾಗುತ್ತಿದೆ. ಕೆಲಸ ಕಳೆದುಕೊಂಡ ಯುವಜನರು ಕಂಗಾಲಾಗಿದ್ದಾರೆ. ಇದು ಕೇಂದ್ರ ಸರ್ಕಾರದ ತಪ್ಪು ಆರ್ಥಿಕ ನೀತಿಗಳಿಂದಾಗುತ್ತಿದೆ. ಈಗ ಇದನ್ನು ಕೊರೊನಾ ವೈರಸ್ ಮೇಲೆ ಹಾಕಲಾಗುತ್ತಿದೆ ಎಂದು ಆರೋಪಿಸಿದರು.</p>.<p>ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಕರುಣಾಕರನ್ ಮಾತನಾಡಿ, ‘ಕಾಂಗ್ರೆಸ್ ಈಗ ವಿರೋಧ ಪಕ್ಷವಾಗಿ ಹೀನಾಯ ಸ್ಥಿತಿಗೆ ಬಂದಿದೆ. ನಾಯಕತ್ವ ಬದಲಾವಣೆಗೆ ಹೆದರಿದ ಬಿ.ಎಸ್.ಯಡಿಯೂರಪ್ಪ ಅವರೂ ಗಟ್ಟಿ ದನಿಯಲ್ಲಿ ಕೇಂದ್ರವನ್ನು ಪ್ರಶ್ನಿಸುತ್ತಿಲ್ಲ. ಎಲ್ಲ ಚುನಾಯಿತ ಪ್ರತಿನಿಧಿಗಳೂ ಸುಮ್ಮನಿದ್ದಾರೆ’ ಎಂದು ಆಕ್ಷೇಪ ವ್ಯಕ್ತಪಡಿಸಿದರು.</p>.<p>ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಅಭಿರುಚಿ ಗಣೇಶ್ ಮಾತನಾಡಿ, ‘ಹಿಂದಿನ ಜಡ್ಡುಗಟ್ಟಿದ ವ್ಯವಸ್ಥೆಯನ್ನು ಬದಲಿಸಲು ಯುವಜನರು ಈ ಸರ್ಕಾರ ತಂದರು. ಆದರೆ, ಈ ಸರ್ಕಾರವೂ ಜಡ್ಡುಗಟ್ಟಿದೆ. ಪರ್ಯಾಯ ವ್ಯವಸ್ಥೆ ಬೇಕಿದೆ’ ಎಂದು ಅಭಿಪ್ರಾಯಪಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು: </strong>ಕೇಂದ್ರ ಸರ್ಕಾರದ ಇತ್ತೀಚಿನ ನಡವಳಿಕೆಗಳು ಒಕ್ಕೂಟ ವ್ಯವಸ್ಥೆಯನ್ನು ದುರ್ಬಲಗೊಳಿಸುತ್ತಿವೆ ಎಂದು ಸ್ವರಾಜ್ ಇಂಡಿಯಾ ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಉಗ್ರನರಸಿಂಹೇಗೌಡ ಆತಂಕ ವ್ಯಕ್ತಪಡಿಸಿದರು.</p>.<p>ರಾಜ್ಯ ಸರ್ಕಾರದ ಪಾಲಿನ ಜಿಎಸ್ಟಿ ಪರಿಹಾರ ಮೊತ್ತ ₹ 14 ಸಾವಿರ ಕೊಡದೇ ಸಾಲ ಮಾಡಲು ಕೇಂದ್ರ ಸರ್ಕಾರ ಸೂಚಿಸಿರುವುದು ರಾಜ್ಯದ ಆರ್ಥಿಕ ಸ್ಥಿತಿಗೆ ಗಾಯದ ಮೇಲೆ ಬರೆ ಎಳೆದಂತೆ ಆಗಿದೆ. ರಾಜ್ಯದ ಬಿಜೆಪಿ ಸಂಸದರು ಈ ಕುರಿತು ದನಿ ಎತ್ತುತ್ತಿಲ್ಲ ಎಂದು ಅವರು ಇಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಬೇಸರ ವ್ಯಕ್ತಪಡಿಸಿದರು.</p>.<p>ನಿಜಕ್ಕೂ ಇದು ಒಕ್ಕೂಟ ವ್ಯವಸ್ಥೆಯನ್ನು ದುರ್ಬಲಗೊಳಿಸುವಂತಹ ನಡವಳಿಕೆಯಾಗಿದೆ. ಜನತಂತ್ರ ವ್ಯವಸ್ಥೆಯಲ್ಲಿ ಇದು ಅಪಾಯಕಾರಿ ಬೆಳವಣಿಗೆ ಎಂದು ಅವರು ವಿಶ್ಲೇಷಿಸಿದರು.</p>.<p>ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತುಮಕೂರಿನಲ್ಲಿ ಬಹಿರಂಗವಾಗಿ ಪ್ರಧಾನಿಯವರ ಮುಂದೆಯೇ ₹ 35 ಸಾವಿರ ಕೋಟಿ ಪರಿಹಾರ ಕೊಡಿ ಎಂದು ಕೇಳಿದ್ದಕ್ಕೆ ಕೊಟ್ಟಿದ್ದು ಬರೇ ₹ 4 ಸಾವಿರ ಕೋಟಿ. ಸತತವಾಗಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ರಾಜ್ಯವನ್ನು ನಿರ್ಲಕ್ಷಿಸುತ್ತಿದೆ ಎಂದು ಅವರು ಹರಿಹಾಯ್ದರು.</p>.<p>ಪಕ್ಷದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಪುನೀತ್ ಮಾತನಾಡಿ, ‘ರಾಜ್ಯದ 25 ಸಂಸದರು ತಮ್ಮ ಕಿವಿಯನ್ನು ಕಿವುಡಾಗಿ, ಬಾಯಿಯನ್ನು ಮೂಕವನ್ನಾಗಿಸಿಕೊಂಡಿದ್ದಾರೆ. ರಾಜ್ಯಕ್ಕೆ ಬರಬೇಕಾದ ಪಾಲು ಕೊಡಿ ಎಂದು ಅವರು ಕೇಳುತ್ತಿಲ್ಲ’ ಎಂದು ಕಿಡಿಕಾರಿದರು.</p>.<p>ದೇಶದಲ್ಲಿ ಶರವೇಗದಲ್ಲಿ ಉದ್ಯೋಗ ನಾಶವಾಗುತ್ತಿದೆ. ಕೆಲಸ ಕಳೆದುಕೊಂಡ ಯುವಜನರು ಕಂಗಾಲಾಗಿದ್ದಾರೆ. ಇದು ಕೇಂದ್ರ ಸರ್ಕಾರದ ತಪ್ಪು ಆರ್ಥಿಕ ನೀತಿಗಳಿಂದಾಗುತ್ತಿದೆ. ಈಗ ಇದನ್ನು ಕೊರೊನಾ ವೈರಸ್ ಮೇಲೆ ಹಾಕಲಾಗುತ್ತಿದೆ ಎಂದು ಆರೋಪಿಸಿದರು.</p>.<p>ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಕರುಣಾಕರನ್ ಮಾತನಾಡಿ, ‘ಕಾಂಗ್ರೆಸ್ ಈಗ ವಿರೋಧ ಪಕ್ಷವಾಗಿ ಹೀನಾಯ ಸ್ಥಿತಿಗೆ ಬಂದಿದೆ. ನಾಯಕತ್ವ ಬದಲಾವಣೆಗೆ ಹೆದರಿದ ಬಿ.ಎಸ್.ಯಡಿಯೂರಪ್ಪ ಅವರೂ ಗಟ್ಟಿ ದನಿಯಲ್ಲಿ ಕೇಂದ್ರವನ್ನು ಪ್ರಶ್ನಿಸುತ್ತಿಲ್ಲ. ಎಲ್ಲ ಚುನಾಯಿತ ಪ್ರತಿನಿಧಿಗಳೂ ಸುಮ್ಮನಿದ್ದಾರೆ’ ಎಂದು ಆಕ್ಷೇಪ ವ್ಯಕ್ತಪಡಿಸಿದರು.</p>.<p>ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಅಭಿರುಚಿ ಗಣೇಶ್ ಮಾತನಾಡಿ, ‘ಹಿಂದಿನ ಜಡ್ಡುಗಟ್ಟಿದ ವ್ಯವಸ್ಥೆಯನ್ನು ಬದಲಿಸಲು ಯುವಜನರು ಈ ಸರ್ಕಾರ ತಂದರು. ಆದರೆ, ಈ ಸರ್ಕಾರವೂ ಜಡ್ಡುಗಟ್ಟಿದೆ. ಪರ್ಯಾಯ ವ್ಯವಸ್ಥೆ ಬೇಕಿದೆ’ ಎಂದು ಅಭಿಪ್ರಾಯಪಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>