<p>ಮೈಸೂರು: ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಗೆ ಸೇರಿದ ಪುರುಷರ ಹಾಸ್ಟೆಲ್ನ ನವೀಕರಣಕ್ಕೆ ಶೀಘ್ರದಲ್ಲೇ ಕ್ರಮಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದರು.</p>.<p>ಜೆಎಲ್ಬಿ ರಸ್ತೆಯಲ್ಲಿರುವ ಹಾಸ್ಟೆಲ್ ಕಟ್ಟಡಕ್ಕೆ ಸಚಿವರು ಸೋಮವಾರ ಭೇಟಿ ನೀಡಿ ಪರಿಶೀಲಿಸಿದರು. 58 ವರ್ಷಕ್ಕೂ ಹಳೆಯದಾದ ಹಾಸ್ಟೆಲ್ನ ಕೋಣೆಯೊಂದರ ಚಾವಣಿಯ ಗಾರೆಯು ಕಳೆದ ವಾರ ಕುಸಿದು ಬಿದ್ದಿತ್ತು. ಈ ಹಿನ್ನೆಲೆಯಲ್ಲಿ ಸಚಿವರು ಭೇಟಿ ನೀಡಿ ಹಾಸ್ಟೆಲ್ನ ಸ್ಥಿತಿಗತಿಗಳ ಬಗ್ಗೆ ಮಾಹಿತಿ ಪಡೆದುಕೊಂಡರು.</p>.<p>‘ಹಾಸ್ಟೆಲ್ ಕಟ್ಟಡ ಶಿಥಿಲಾವಸ್ಥೆಯ ಲ್ಲಿರುವ ವಿಷಯ ಮಾಧ್ಯಮಗಳ ಮೂಲಕ ನನ್ನ ಗಮನಕ್ಕೆ ಬಂದ ಹಿನ್ನೆಲೆಯಲ್ಲಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇನೆ. ಈ ಸಂಬಂಧ ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಅವರನ್ನು ಶೀಘ್ರದಲ್ಲೇ ಭೇಟಿ ಮಾಡಿ ಚರ್ಚೆ ಮಾಡುತ್ತೇನೆ. ದುರಸ್ತಿಗೆ ಬೇಕಾಗಿರುವ ಅನುದಾನ ಮಂಜೂರು ಮಾಡಿಸಲಾಗುವುದು’ ಎಂದು ಸಚಿವರು ಸುದ್ದಿಗಾರರಿಗೆ ತಿಳಿಸಿದರು.</p>.<p>ಹಾಸ್ಟೆಲ್ ದುರಸ್ತಿಗೆ ₹ 7 ಕೋಟಿ ವೆಚ್ಚವಾಗಬಹುದು ಎಂದು ಈ ಹಿಂದೆ ಅಂದಾಜು ಮಾಡಲಾಗಿತ್ತು. ಈಗ ಎಲ್ಲ ವಸ್ತುಗಳ ಬೆಲೆ ಏರಿಕೆಯಾ<br />ಗಿರುವ ಹಿನ್ನೆಲೆಯಲ್ಲಿ ಹಿಂದಿನ ಅಂದಾಜು ವೆಚ್ಚಕ್ಕಿಂತ ಶೇ 10ರಿಂದ ಶೇ 15 ರಷ್ಟು ವೆಚ್ಚ ಹೆಚ್ಚಾಗಬಹುದು. ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದರು.</p>.<p class="Subhead">ಜಿಲ್ಲೆಯ ಅಭಿವೃದ್ಧಿಗೆ ಬದ್ಧ: ‘ನಾನು ಮೈಸೂರು ಜಿಲ್ಲೆಯ ಸಂಪೂರ್ಣ ಅಭಿವೃದ್ಧಿಗೆ ಬದ್ಧವಾಗಿದ್ದೇನೆ. ಮಾಧ್ಯಮಗಳು, ಜನಪ್ರತಿನಿಧಿಗಳು ಇಲ್ಲವೇ ಸಾರ್ವಜನಿಕರಿಂದ ಇಲ್ಲಿನ ಸಮಸ್ಯೆಗಳು ಗಮನಕ್ಕೆ ಬಂದರೆ ತಕ್ಷಣ ಸ್ಪಂದಿಸುತ್ತೇನೆ’ ಎಂದು ಹೇಳಿದರು.</p>.<p>ಅಂಬೇಡ್ಕರ್ ಭವನಕ್ಕೆ ಹೆಚ್ಚುವರಿ ₹ 18 ಕೋಟಿ ಅನುದಾನಕ್ಕೆ ಒಪ್ಪಿಗೆ ಪಡೆಯಲು ಸಂಪುಟ ಸಭೆಯಲ್ಲಿ ಪ್ರಸ್ತಾವನೆ ಇಡುವ ತೀರ್ಮಾನಕ್ಕೆ ಬರಲಾಗಿದೆ ಎಂದು ತಿಳಿಸಿದರು.</p>.<p>ಶಾಸಕ ಎಲ್.ನಾಗೇಂದ್ರ, ಮುಡಾ ಅಧ್ಯಕ್ಷ ಎಚ್.ವಿ.ರಾಜೀವ್, ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಡೀನ್ ಡಾ.ಸಿ.ಪಿ.ನಂಜರಾಜ್, ಇತರ ಅಧಿಕಾರಿಗಳು ಉಪಸ್ಥಿತರಿದ್ದರು.</p>.<p>‘ನಿರ್ವಹಣೆಯ ಕೊರತೆ’</p>.<p>‘ಸೂಕ್ತ ನಿರ್ವಹಣೆ ಮಾಡದೇ ಇರುವುದರಿದ ಕಟ್ಟಡಕ್ಕೆ ಈ ಸ್ಥಿತಿ ಒದಗಿದೆ. ಮದ್ರಾಸ್ ತಾರಸಿಯ ಕಟ್ಟಡ ಇದಾಗಿದೆ. ಪ್ರತಿ ವರ್ಷ ನಿರ್ವಹಣೆ ಮಾಡಿದ್ದರೆ ಇನ್ನೂ 10 ರಿಂದ 12 ವರ್ಷ ಯಾವುದೇ ತೊಂದರೆ ಆಗುತ್ತಿರಲಿಲ್ಲ’ ಎಂದು ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಡೀನ್ ಡಾ.ಸಿ.ಪಿ.ನಂಜರಾಜ್ ತಿಳಿಸಿದರು.</p>.<p>ಕಟ್ಟಡದ ನವೀಕರಣಕ್ಕೆ 2017 ರಲ್ಲಿ ಸರ್ಕಾರಕ್ಕೆ ₹ 7.5 ಕೋಟಿ ಅಂದಾಜು ವೆಚ್ಚ ಸಲ್ಲಿಸಲಾಗಿತ್ತು. ಆದರೆ ಅದು ಬಿಡುಗಡೆ ಆಗಿಲ್ಲ. ಎಂಜಿನಿಯರುಗಳು ಮತ್ತೆ ಪರಿಶೀಲನೆ ನಡೆಸಿದ್ದಾರೆ. 8–10 ದಿನಗಳಲ್ಲಿ ಅವರು ವರದಿ ನೀಡಬಹುದು. ನವೀಕರಣಕ್ಕೆ ಎಷ್ಟು ಹಣ ಬೇಕಾಗಬಹುದು ಎಂಬುದು ಆ ಬಳಿಕ ಅಂದಾಜು ಮಾಡಲಾಗುವುದು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮೈಸೂರು: ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಗೆ ಸೇರಿದ ಪುರುಷರ ಹಾಸ್ಟೆಲ್ನ ನವೀಕರಣಕ್ಕೆ ಶೀಘ್ರದಲ್ಲೇ ಕ್ರಮಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದರು.</p>.<p>ಜೆಎಲ್ಬಿ ರಸ್ತೆಯಲ್ಲಿರುವ ಹಾಸ್ಟೆಲ್ ಕಟ್ಟಡಕ್ಕೆ ಸಚಿವರು ಸೋಮವಾರ ಭೇಟಿ ನೀಡಿ ಪರಿಶೀಲಿಸಿದರು. 58 ವರ್ಷಕ್ಕೂ ಹಳೆಯದಾದ ಹಾಸ್ಟೆಲ್ನ ಕೋಣೆಯೊಂದರ ಚಾವಣಿಯ ಗಾರೆಯು ಕಳೆದ ವಾರ ಕುಸಿದು ಬಿದ್ದಿತ್ತು. ಈ ಹಿನ್ನೆಲೆಯಲ್ಲಿ ಸಚಿವರು ಭೇಟಿ ನೀಡಿ ಹಾಸ್ಟೆಲ್ನ ಸ್ಥಿತಿಗತಿಗಳ ಬಗ್ಗೆ ಮಾಹಿತಿ ಪಡೆದುಕೊಂಡರು.</p>.<p>‘ಹಾಸ್ಟೆಲ್ ಕಟ್ಟಡ ಶಿಥಿಲಾವಸ್ಥೆಯ ಲ್ಲಿರುವ ವಿಷಯ ಮಾಧ್ಯಮಗಳ ಮೂಲಕ ನನ್ನ ಗಮನಕ್ಕೆ ಬಂದ ಹಿನ್ನೆಲೆಯಲ್ಲಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇನೆ. ಈ ಸಂಬಂಧ ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಅವರನ್ನು ಶೀಘ್ರದಲ್ಲೇ ಭೇಟಿ ಮಾಡಿ ಚರ್ಚೆ ಮಾಡುತ್ತೇನೆ. ದುರಸ್ತಿಗೆ ಬೇಕಾಗಿರುವ ಅನುದಾನ ಮಂಜೂರು ಮಾಡಿಸಲಾಗುವುದು’ ಎಂದು ಸಚಿವರು ಸುದ್ದಿಗಾರರಿಗೆ ತಿಳಿಸಿದರು.</p>.<p>ಹಾಸ್ಟೆಲ್ ದುರಸ್ತಿಗೆ ₹ 7 ಕೋಟಿ ವೆಚ್ಚವಾಗಬಹುದು ಎಂದು ಈ ಹಿಂದೆ ಅಂದಾಜು ಮಾಡಲಾಗಿತ್ತು. ಈಗ ಎಲ್ಲ ವಸ್ತುಗಳ ಬೆಲೆ ಏರಿಕೆಯಾ<br />ಗಿರುವ ಹಿನ್ನೆಲೆಯಲ್ಲಿ ಹಿಂದಿನ ಅಂದಾಜು ವೆಚ್ಚಕ್ಕಿಂತ ಶೇ 10ರಿಂದ ಶೇ 15 ರಷ್ಟು ವೆಚ್ಚ ಹೆಚ್ಚಾಗಬಹುದು. ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದರು.</p>.<p class="Subhead">ಜಿಲ್ಲೆಯ ಅಭಿವೃದ್ಧಿಗೆ ಬದ್ಧ: ‘ನಾನು ಮೈಸೂರು ಜಿಲ್ಲೆಯ ಸಂಪೂರ್ಣ ಅಭಿವೃದ್ಧಿಗೆ ಬದ್ಧವಾಗಿದ್ದೇನೆ. ಮಾಧ್ಯಮಗಳು, ಜನಪ್ರತಿನಿಧಿಗಳು ಇಲ್ಲವೇ ಸಾರ್ವಜನಿಕರಿಂದ ಇಲ್ಲಿನ ಸಮಸ್ಯೆಗಳು ಗಮನಕ್ಕೆ ಬಂದರೆ ತಕ್ಷಣ ಸ್ಪಂದಿಸುತ್ತೇನೆ’ ಎಂದು ಹೇಳಿದರು.</p>.<p>ಅಂಬೇಡ್ಕರ್ ಭವನಕ್ಕೆ ಹೆಚ್ಚುವರಿ ₹ 18 ಕೋಟಿ ಅನುದಾನಕ್ಕೆ ಒಪ್ಪಿಗೆ ಪಡೆಯಲು ಸಂಪುಟ ಸಭೆಯಲ್ಲಿ ಪ್ರಸ್ತಾವನೆ ಇಡುವ ತೀರ್ಮಾನಕ್ಕೆ ಬರಲಾಗಿದೆ ಎಂದು ತಿಳಿಸಿದರು.</p>.<p>ಶಾಸಕ ಎಲ್.ನಾಗೇಂದ್ರ, ಮುಡಾ ಅಧ್ಯಕ್ಷ ಎಚ್.ವಿ.ರಾಜೀವ್, ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಡೀನ್ ಡಾ.ಸಿ.ಪಿ.ನಂಜರಾಜ್, ಇತರ ಅಧಿಕಾರಿಗಳು ಉಪಸ್ಥಿತರಿದ್ದರು.</p>.<p>‘ನಿರ್ವಹಣೆಯ ಕೊರತೆ’</p>.<p>‘ಸೂಕ್ತ ನಿರ್ವಹಣೆ ಮಾಡದೇ ಇರುವುದರಿದ ಕಟ್ಟಡಕ್ಕೆ ಈ ಸ್ಥಿತಿ ಒದಗಿದೆ. ಮದ್ರಾಸ್ ತಾರಸಿಯ ಕಟ್ಟಡ ಇದಾಗಿದೆ. ಪ್ರತಿ ವರ್ಷ ನಿರ್ವಹಣೆ ಮಾಡಿದ್ದರೆ ಇನ್ನೂ 10 ರಿಂದ 12 ವರ್ಷ ಯಾವುದೇ ತೊಂದರೆ ಆಗುತ್ತಿರಲಿಲ್ಲ’ ಎಂದು ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಡೀನ್ ಡಾ.ಸಿ.ಪಿ.ನಂಜರಾಜ್ ತಿಳಿಸಿದರು.</p>.<p>ಕಟ್ಟಡದ ನವೀಕರಣಕ್ಕೆ 2017 ರಲ್ಲಿ ಸರ್ಕಾರಕ್ಕೆ ₹ 7.5 ಕೋಟಿ ಅಂದಾಜು ವೆಚ್ಚ ಸಲ್ಲಿಸಲಾಗಿತ್ತು. ಆದರೆ ಅದು ಬಿಡುಗಡೆ ಆಗಿಲ್ಲ. ಎಂಜಿನಿಯರುಗಳು ಮತ್ತೆ ಪರಿಶೀಲನೆ ನಡೆಸಿದ್ದಾರೆ. 8–10 ದಿನಗಳಲ್ಲಿ ಅವರು ವರದಿ ನೀಡಬಹುದು. ನವೀಕರಣಕ್ಕೆ ಎಷ್ಟು ಹಣ ಬೇಕಾಗಬಹುದು ಎಂಬುದು ಆ ಬಳಿಕ ಅಂದಾಜು ಮಾಡಲಾಗುವುದು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>