ಈ ಕುರಿತು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ನಾಗರಹೊಳೆ ಹುಲಿ ರಕ್ಷಿತಾರಣ್ಯದ ಹುಲಿ ಯೋಜನೆ ನಿರ್ದೇಶಕ ಮಹೇಶ್ಕುಮಾರ್, ‘ಇವರನ್ನು ಪುನರ್ವಸತಿ ಮಾಡಬೇಕಾದರೆ ಗ್ರಾಮಸಭೆಯ ಒಪ್ಪಿಗೆ ಬೇಕು. ಜಿಲ್ಲಾಧಿಕಾರಿ ನೇತೃತ್ವದ ಜಿಲ್ಲಾಮಟ್ಟದ ಸಮಿತಿಯಲ್ಲಿ ತೀರ್ಮಾನವಾಗಬೇಕು. ಅಲ್ಲಿಯವರೆಗೂ ಇವರು ಕಳೆದ 8 ವರ್ಷಗಳಿಂದ ಎಲ್ಲಿ ವಾಸವಿದ್ದರೋ ಅಲ್ಲಿಯೇ ಇರಬೇಕು. ಅನಧಿಕೃತವಾಗಿ ಮನೆಗಳಲ್ಲಿ ಉಳಿದುಕೊಂಡರೆ ಅದು ಕಾನೂನಿನ ಉಲ್ಲಂಘನೆ. ಇದರಿಂದ ನಿಜವಾದ ಫಲಾನುಭವಿಗಳಿಗೆ ಅನ್ಯಾಯವಾಗುತ್ತದೆ’ ಎಂದರು.