ನವೆಂಬರ್ 17ರಂದು ಮೈಸೂರಿನ ಬನ್ನಿಮಂಟಪದಲ್ಲಿ ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ತನ್ವೀರ್ ಅವರ ಹತ್ಯೆ ಯತ್ನ ನಡೆದಿತ್ತು. ಹಲ್ಲೆ ನಡೆಸಿದ ಮೇಲೆ ಫರ್ಹಾನ್ ಪಾಷಾ ಎಂಬಾತ ಸಿಕ್ಕಿಬಿದ್ದಿದ್ದ. ನಂತರ, ಡಿಸಿಪಿ ಆಗಿದ್ದ ಮುತ್ತುರಾಜ್ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚಿಸಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ರಂ, ಅಬೀದ್ ಪಾಷಾ, ನೂರ್ಖಾನ್, ಮುಜೀಬ್, ಮುಜಾಮಿಲ್, ಮತಿನ್ಬೇಗ್ ಮತ್ತು ಇರ್ಫಾನ್ ಎಂಬುವವರನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.