ಮೈಸೂರು: ‘ದೇಶದ ಭವಿಷ್ಯದ ಪೀಳಿಗೆಯನ್ನು ತಮ್ಮ ಜ್ಞಾನದಿಂದ ಶ್ರೀಮಂತಗೊಳಿಸುವ ಮೂಲಕ ದೇಶದ ಅಡಿಪಾಯವನ್ನು ನಿರ್ಮಿಸುವಲ್ಲಿ ಶಿಕ್ಷಕರು ಅತ್ಯಂತ ನಿರ್ಣಾಯಕ ಪಾತ್ರ ವಹಿಸುತ್ತಾರೆ’ ಎಂದು ವಾಕ್ ಮತ್ತು ಭಾಷಾ ತಜ್ಞೆ ಕಾವೇರಿ ಸೋಮಶೇಖರ್ ಹೇಳಿದರು.
ವಿಜಯನಗರ 4ನೇ ಹಂತದಲ್ಲಿರುವ ಸಮರ್ಥನಂ ವಿಶೇಷ ಮಕ್ಕಳ ಶಾಲೆಯಲ್ಲಿ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಸಮರ್ಥನಂ ಸಂಸ್ಥೆಯ ಮೈಸೂರು ವಿಭಾಗದ ಮುಖ್ಯಸ್ಥ ಶಿವರಾಜು, ಅಧ್ಯಕ್ಷತೆ ವಹಿಸಿದ್ದ ಶಾಲೆಯ ಮುಖ್ಯಶಿಕ್ಷಕಿ ಭ್ರಮಾರಂಭ ಮಾತನಾಡಿದರು.
ವಿಶೇಷ ಶಿಕ್ಷಕಿಯರಾದ ಪಿ.ಪದ್ಮಾ, ವಿದ್ಯಾವತಿ, ವಿನೋದ, ಈ.ಪವಿತ್ರಾ, ಪೋಷಕ ಪೃಥ್ವಿರಾಜ್ ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.