ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೃತದೇಹದ ಗುರುತು ಪತ್ತೆಗೆ ತಂಡ

Last Updated 12 ನವೆಂಬರ್ 2020, 5:58 IST
ಅಕ್ಷರ ಗಾತ್ರ

ಮೈಸೂರು: ಪಿರಿಯಾ‍ಪಟ್ಟಣ ತಾಲ್ಲೂಕಿನಲ್ಲಿ ಈಚೆಗೆ ಉರಿಯುತ್ತಿರುವ ಸ್ಥಿತಿಯಲ್ಲಿ ದೊರೆತ ಯುವತಿ ಶವದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತದೇಹದ ಗುರುತು ಪತ್ತೆ ಹಚ್ಚಲು 3 ಪ್ರತ್ಯೇಕ ಪೊಲೀಸ್ ತಂಡಗಳನ್ನು ರಚಿಸಲಾಗಿದೆ.

ಐಪಿಎಸ್‌ ಪ್ರೊಬೇಷನರಿ ಅಧಿಕಾರಿ ಜಿತೇಂದ್ರ ಅವರಿಗೆ ಪ್ರಕರಣದ ತನಿಖೆಯ ಹೊಣೆ ವಹಿಸಲಾಗಿದೆ. ಯುವತಿಯ ಗುರುತು ಪತ್ತೆಗೆ ರಾಜ್ಯದ ಇತರೆ ಜಿಲ್ಲೆಗಳ ಪೊಲೀಸ್ ಠಾಣೆಗಳಿಗೂ ಮಾಹಿತಿ ನೀಡಲಾಗಿದೆ.

ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿ ಕಾಣೆಯಾಗಿದ್ದ ಯುವತಿಯೊಬ್ಬರ ಪೋಷಕರು ಬಂದು ಮೃತದೇಹವನ್ನು ನೋಡಿದರಾದರೂ, ಅವರು ಗುರುತು ಪತ್ತೆ ಹಚ್ಚಲಿಲ್ಲ. ಮೃತದೇಹದ ಮರಣೋತ್ತರ ಪರೀಕ್ಷಾ ವರದಿಯನ್ನು ನಿರೀಕ್ಷಿಸಲಾಗುತ್ತಿದ್ದು, ನಂತರವಷ್ಟೇ ಸ್ಪಷ್ಟವಾದ ತೀರ್ಮಾನಕ್ಕೆ ಬರಲು ಸಾಧ್ಯ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT