ಸಮೀಪದಲ್ಲಿದ್ದ ಸಾರ್ವಜನಿಕರು ಬಂದು ನೋಡಿ ಆಂಬುಲೆನ್ಸ್ಗೆ ಕರೆ ಮಾಡಿದ್ದಾರೆ. ಅದೇ ವೇಳೆಗೆ ತಾಲ್ಲೂಕಿನ ಗಡಿಭಾಗ ಕೊಪ್ಪ ಬಳಿಯ ನೆರೆಪೀಡಿತ ಪ್ರದೇಶಗಳ ವೀಕ್ಷಣೆಗೆ ತೆರಳುತ್ತಿದ್ದ ತಹಶೀಲ್ದಾರ್ ಅಪಘಾತವಾಗಿರುವುದನ್ನು ಗಮನಿಸಿ ತಕ್ಷಣ ತಮ್ಮ ವಾಹನದಲ್ಲಿ ಸಮೀಪದ ಕೊಪ್ಪ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.