<p><strong>ಮದ್ದೂರು:</strong> ಪಟ್ಟಣದ ಸಮೀಪವಿರುವ ಹೊಟ್ಟೇಗೌಡನ ದೊಡ್ಡಿಯಲ್ಲಿ, ಅಭಿಮಾನಿಗಳು ನಟ ಅಂಬರೀಷ ಅವರ ನೆನಪಿಗಾಗಿ ಪುಟ್ಟದೊಂದು ‘ಅಂಬಿ ಗುಡಿ’ ನಿರ್ಮಿಸಿ ಅಭಿಮಾನ ಮೆರೆದಿದ್ದಾರೆ.</p>.<p>ನ.24ರಂದು ಅಂಬರೀಷ್ ಪತ್ನಿ, ಸಂಸದೆ ಸುಮಲತಾ ಉದ್ಘಾಟನೆ ನೆರವೇರಿಸಲಿದ್ದಾರೆ. ಅವರ ಪುತ್ರ ಅಭಿಷೇಕ್, ನಟರಾದ ದರ್ಶನ್, ದೊಡ್ಡಣ್ಣ, ನಿರ್ಮಾಪಕ ರಾಕ್ಲೈನ್ ವೆಂಕಟೇಶ್ ಭಾಗವಹಿಸಲಿದ್ದಾರೆ.</p>.<p>ಅಂಬರೀಷ ಅಭಿಮಾನಿಗಳ ಸಂಘದ ಪದಾಧಿಕಾರಿಗಳು ಸ್ವಂತ ಹಣದಿಂದ ₹2 ಲಕ್ಷ ವೆಚ್ಚದಲ್ಲಿ ಅಂಬರೀಷ ಅವರ ಕಂಚಿನ ಪುತ್ಥಳಿಯನ್ನು ಮಾಡಿಸಿದ್ದಾರೆ. ಅದನ್ನು ಗ್ರಾಮದ ವೃತ್ತದಲ್ಲಿ ಪ್ರತಿಷ್ಠಾಪಿಸಿ ಗುಡಿ ನಿರ್ಮಿಸಿದ್ದಾರೆ. ಪಕ್ಕದಲ್ಲಿಯೇ ಚಿಕ್ಕ ಉದ್ಯಾನವನ್ನೂ ನಿರ್ಮಿಸಲಾಗಿದ್ದು, ನಾಲ್ಕು ಕಡೆಗಳಲ್ಲಿ ಸಿ.ಸಿ.ಟಿ.ವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಗುಡಿ ನಿರ್ಮಾಣಕ್ಕೆ ಒಟ್ಟು ₹8 ಲಕ್ಷ ಖರ್ಚಾಗಿದೆ.</p>.<p>‘ಗ್ರಾಮದಲ್ಲಿ 20 ವರ್ಷಗಳ ಹಿಂದೆ ಅಂಬರೀಷ ಅಭಿಮಾನಿಗಳ ಸಂಘವನ್ನು ಸ್ಥಾಪಿಸಿದ್ದು, ಅವರ ಹೆಸರಿನಲ್ಲಿ ಸಮಾಜಮುಖಿ ಕೆಲಸಗಳನ್ನು ಮಾಡುತ್ತಿದ್ದೇವೆ. ಅಂಬರೀಷ ನಿಧನದ ನೋವನ್ನು ಮರೆಯಲಾಗಲಿಲ್ಲ. ಅವರ ನೆನಪಿಗಾಗಿ 40ಕ್ಕೂ ಹೆಚ್ಚು ಯುವಕರು ತಮ್ಮ ದುಡಿಮೆಯ ಒಂದಷ್ಟು ಪಾಲನ್ನು ದೇಣಿಗೆಯಾಗಿ ನೀಡಿದ್ದು, ಈ ಹಣದಲ್ಲಿ ‘ಅಂಬಿ ಗುಡಿ’ ನಿರ್ಮಿಸಲಾಗಿದೆ. ಅಂಬರೀಷ ಅವರ ಅಸ್ಥಿಯನ್ನು ಹಾಕಿ ಅದರ ಮೇಲೆ ಕಂಚಿನ ಪುತ್ಥಳಿಯನ್ನು ಇರಿಸಲಾಗಿದೆ. ಈ ಮೂಲಕ ನಮ್ಮ ಹೃದಯದಲ್ಲಿ ಅಂಬಿ ಚಿರಸ್ಥಾಯಿಯಾಗಿ ಉಳಿಯಲಿದ್ದಾರೆ’ ಎಂದು ಸಂಘದ ಅಧ್ಯಕ್ಷ ನಾಗೇಶ್ ‘ಪ್ರಜಾವಾಣಿ’ಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮದ್ದೂರು:</strong> ಪಟ್ಟಣದ ಸಮೀಪವಿರುವ ಹೊಟ್ಟೇಗೌಡನ ದೊಡ್ಡಿಯಲ್ಲಿ, ಅಭಿಮಾನಿಗಳು ನಟ ಅಂಬರೀಷ ಅವರ ನೆನಪಿಗಾಗಿ ಪುಟ್ಟದೊಂದು ‘ಅಂಬಿ ಗುಡಿ’ ನಿರ್ಮಿಸಿ ಅಭಿಮಾನ ಮೆರೆದಿದ್ದಾರೆ.</p>.<p>ನ.24ರಂದು ಅಂಬರೀಷ್ ಪತ್ನಿ, ಸಂಸದೆ ಸುಮಲತಾ ಉದ್ಘಾಟನೆ ನೆರವೇರಿಸಲಿದ್ದಾರೆ. ಅವರ ಪುತ್ರ ಅಭಿಷೇಕ್, ನಟರಾದ ದರ್ಶನ್, ದೊಡ್ಡಣ್ಣ, ನಿರ್ಮಾಪಕ ರಾಕ್ಲೈನ್ ವೆಂಕಟೇಶ್ ಭಾಗವಹಿಸಲಿದ್ದಾರೆ.</p>.<p>ಅಂಬರೀಷ ಅಭಿಮಾನಿಗಳ ಸಂಘದ ಪದಾಧಿಕಾರಿಗಳು ಸ್ವಂತ ಹಣದಿಂದ ₹2 ಲಕ್ಷ ವೆಚ್ಚದಲ್ಲಿ ಅಂಬರೀಷ ಅವರ ಕಂಚಿನ ಪುತ್ಥಳಿಯನ್ನು ಮಾಡಿಸಿದ್ದಾರೆ. ಅದನ್ನು ಗ್ರಾಮದ ವೃತ್ತದಲ್ಲಿ ಪ್ರತಿಷ್ಠಾಪಿಸಿ ಗುಡಿ ನಿರ್ಮಿಸಿದ್ದಾರೆ. ಪಕ್ಕದಲ್ಲಿಯೇ ಚಿಕ್ಕ ಉದ್ಯಾನವನ್ನೂ ನಿರ್ಮಿಸಲಾಗಿದ್ದು, ನಾಲ್ಕು ಕಡೆಗಳಲ್ಲಿ ಸಿ.ಸಿ.ಟಿ.ವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಗುಡಿ ನಿರ್ಮಾಣಕ್ಕೆ ಒಟ್ಟು ₹8 ಲಕ್ಷ ಖರ್ಚಾಗಿದೆ.</p>.<p>‘ಗ್ರಾಮದಲ್ಲಿ 20 ವರ್ಷಗಳ ಹಿಂದೆ ಅಂಬರೀಷ ಅಭಿಮಾನಿಗಳ ಸಂಘವನ್ನು ಸ್ಥಾಪಿಸಿದ್ದು, ಅವರ ಹೆಸರಿನಲ್ಲಿ ಸಮಾಜಮುಖಿ ಕೆಲಸಗಳನ್ನು ಮಾಡುತ್ತಿದ್ದೇವೆ. ಅಂಬರೀಷ ನಿಧನದ ನೋವನ್ನು ಮರೆಯಲಾಗಲಿಲ್ಲ. ಅವರ ನೆನಪಿಗಾಗಿ 40ಕ್ಕೂ ಹೆಚ್ಚು ಯುವಕರು ತಮ್ಮ ದುಡಿಮೆಯ ಒಂದಷ್ಟು ಪಾಲನ್ನು ದೇಣಿಗೆಯಾಗಿ ನೀಡಿದ್ದು, ಈ ಹಣದಲ್ಲಿ ‘ಅಂಬಿ ಗುಡಿ’ ನಿರ್ಮಿಸಲಾಗಿದೆ. ಅಂಬರೀಷ ಅವರ ಅಸ್ಥಿಯನ್ನು ಹಾಕಿ ಅದರ ಮೇಲೆ ಕಂಚಿನ ಪುತ್ಥಳಿಯನ್ನು ಇರಿಸಲಾಗಿದೆ. ಈ ಮೂಲಕ ನಮ್ಮ ಹೃದಯದಲ್ಲಿ ಅಂಬಿ ಚಿರಸ್ಥಾಯಿಯಾಗಿ ಉಳಿಯಲಿದ್ದಾರೆ’ ಎಂದು ಸಂಘದ ಅಧ್ಯಕ್ಷ ನಾಗೇಶ್ ‘ಪ್ರಜಾವಾಣಿ’ಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>