ಸಂಸದ ಪ್ರತಾಪ ಸಿಂಹ ಮಾತನಾಡಿ, ‘ಅಧಿಕಾರಿಗಳು ಸುಪ್ರೀಂಕೋರ್ಟ್ ಆದೇಶವನ್ನು ತಿರುಚಿ, ಸುಳ್ಳು ಹೇಳುತ್ತಿದ್ದಾರೆ. ನ್ಯಾಯಾಲಯದ ಆದೇಶದಲ್ಲಿ 2009ರ ನಂತರ ಸಾರ್ವಜನಿಕ ಸ್ಥಳಗಳಲ್ಲಿ ಅನಧಿಕೃತವಾಗಿ ದೇವಾಲಯ, ಮಸೀದಿ, ಚರ್ಚ್ಗಳನ್ನು ನಿರ್ಮಿಸದಂತೆ ತಡೆಯಬೇಕು. ಈ ಹಿಂದೆ ಕಟ್ಟಿರುವ ದೇವಾಲಯಗಳನ್ನು ಜನರ ಅಭಿಪ್ರಾಯ ಪಡೆದು ಉಳಿಸಿ ಕೊಳ್ಳಬೇಕು. ಸಾಧ್ಯವಾಗದಿದ್ದರೆ ಬದಲಿ ಜಾಗದಲ್ಲಿ ನಿರ್ಮಾಣ ಮಾಡಿಕೊಡ ಬೇಕು ಎಂದು ಸ್ಪಷ್ಟವಾಗಿ ಹೇಳಿದೆ. ಅಧಿಕಾರಿಗಳು ಇಲ್ಲದ ಗೊಂದಲ ಸೃಷ್ಟಿಸಿ ರಾಜಕಾರಣಿಗಳನ್ನು ಸಹ ದಾರಿ ತಪ್ಪಿಸುತ್ತಿದ್ದಾರೆ. ಜಿಲ್ಲೆಯಲ್ಲಿ ಈ ರೀತಿಯ 92 ದೇವಾಲಯಗಳಿವೆ. ಅವುಗಳನ್ನು ಮುಟ್ಟಲು ಬಿಡುವುದಿಲ್ಲ. ರಾಜಕಾರಣಿಗಳು ಹಾಗೂ ಗ್ರಾಮಸ್ಥರು ಅವಿದ್ಯಾವಂತರೆಂದು ಅಧಿಕಾರಿ ಗಳು ಭಾವಿಸಿದ್ದಾರೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.