ದೇವಾಲಯ ಆಗಮಿಕ ನಾಗಚಂದ್ರ ದೀಕ್ಷಿತ್ ಆಚಾರ್ಯತ್ವದಲ್ಲಿ ಶ್ರೀಕಂಠೇಶ್ವರಸ್ವಾಮಿಗೆ ಚಿನ್ನದ ಕೊಳಗ ತೊಡಿಸಿ, ವಿವಿಧ ಪುಷ್ಪಗಳಿಂದ ಅಲಂಕರಿಸಲಾಗಿತ್ತು. ಮುಂಜಾನೆ ಶ್ರೀಕಂಠೇಶ್ವರನಿಗೆ ಪಂಚತೀರ್ಥಗಳ ಅಭಿಷೇಕ, ಬಿಲ್ವಾರ್ಚನೆ, ಪಂಚಾಮೃತ ಅಭಿಷೇಕ, ಕ್ಷೀರಾಭಿಷೇಕ, ಶಾಲಾನ್ಯ ಅರ್ಪಣೆ, ಕಲ್ಲು- ಸಕ್ಕರೆ, ಪೂಜೆಗಳನ್ನು ನೆರವೇರಿಸಿದ ನಂತರ ಮಹಾಮಂಗಳಾರತಿ ಮಾಡಿ ಭಕ್ತರ ದರ್ಶನಕ್ಕೆ ಅನುವು ಮಾಡಿಕೊಡಲಾಯಿತು.