‘ನಗರ ವ್ಯಾಪ್ತಿ ನದಿಗೆ ತ್ಯಾಜ್ಯ ನೀರು ಸೇರಿ ಕಲುಷಿತಗೊಂಡಿದ್ದು, ಮಳೆಗಾಲದಲ್ಲಿ ಕಲುಷಿತ ನೀರು ಕಾವೇರಿ ನದಿ ಸೇರಿ ಮೈಸೂರು ಸೇರಿದಂತೆ ವಿವಿಧ ನಗರಗಳ ಪೂರೈಕೆಯಾಗುವ ಕುಡಿಯುವ ನೀರು ಕಲುಷಿತಗೊಳ್ಳುತ್ತಿದೆ. ಈ ಹಿಂದೆ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಸೋಮಣ್ಣ ತ್ಯಾಜ್ಯ ನೀರು ನದಿಗೆ ಸೇರದಂತೆ ಯೋಜನೆ ಸಿದ್ಧಪಡಿಸಲು ಸೂಚಿಸಿದ್ದರು. ಅದರಂತೆ ನಗರಸಭೆ ₹ 80 ಕೋಟಿ ವೆಚ್ಚ ಒಳಚರಂಡಿ ಯೋಜನೆ ಸಿದ್ಧಪಡಿಸಿ ಅನುದಾನಕ್ಕಾಗಿ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಿದೆ’ ಎಂದರು.