<p><strong>ಮೈಸೂರು:</strong> ‘ರಾಜ್ಯದಲ್ಲಿನ ಆಡಳಿತದ ಬಗ್ಗೆ ವೈಯಕ್ತಿಕ ಅಭಿಪ್ರಾಯ ಹಂಚಿಕೊಂಡ ನನ್ನನ್ನು ಎರಡ್ಮೂರು ದಿನದಿಂದ ಖಳನಾಯಕನನ್ನಾಗಿ ಬಿಂಬಿಸಲಾಗುತ್ತಿದೆ. ಸ್ನೇಹಿತರ ಮಾತಿನಿಂದ ನೋವಾಗಿದೆ’ ಎಂದು ಸಚಿವ ಸಿ.ಪಿ.ಯೋಗೇಶ್ವರ್ ಮಂಗಳವಾರ ರಾತ್ರಿ ಇಲ್ಲಿ ಪ್ರತಿಕ್ರಿಯಿಸಿದರು.</p>.<p>ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠಕ್ಕೆ ಪೊಲೀಸ್ ಬೆಂಗಾವಲು ಇಲ್ಲದೆ, ಖಾಸಗಿ ಕಾರಿನಲ್ಲಿ ದಿಢೀರ್ ಭೇಟಿ ನೀಡಿದ ಸಚಿವರು, ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಜೊತೆ ಗೋಪ್ಯ ಮಾತುಕತೆ ನಡೆಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು.</p>.<p>‘ನನ್ನ ಮನಸ್ಸಿನ ನೋವನ್ನು ಸ್ವಾಮೀಜಿ ಬಳಿ ಹೇಳಿಕೊಂಡೆ. ಮನಸ್ಸು ಹಗುರವಾಯಿತು. ಧಾರ್ಮಿಕ ಕ್ಷೇತ್ರದಲ್ಲಿ ರಾಜಕೀಯ ಮಾತನಾಡಲ್ಲ’ ಎಂದು ಕೈ ಮುಗಿದರು.</p>.<p>‘ಪೊಲೀಸ್ ಬೆಂಗಾವಲು, ಸರ್ಕಾರಿ ಕಾರಿನಲ್ಲಿ ಬರಲಿಲ್ಲ ಅಂದ್ರೆ ನಾನು ಸಚಿವನಲ್ವಾ’ ಎಂದ ಯೋಗೇಶ್ವರ್, ‘ಸಿನಿಮಾದಲ್ಲೂ ನಾನೇ ನಾಯಕ. ರಾಜಕೀಯದಲ್ಲೂ ನಾನೇ ನಾಯಕ’ ಎಂದು ಹೇಳಿದರು. ಪತ್ರಕರ್ತರ ಯಾವೊಂದು ಪ್ರಶ್ನೆಗೆ ಉತ್ತರಿಸದೆ ಬೇಸರದಿಂದಲೇ ಮಠದಿಂದ ಹೊರಟು ಹೋದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ‘ರಾಜ್ಯದಲ್ಲಿನ ಆಡಳಿತದ ಬಗ್ಗೆ ವೈಯಕ್ತಿಕ ಅಭಿಪ್ರಾಯ ಹಂಚಿಕೊಂಡ ನನ್ನನ್ನು ಎರಡ್ಮೂರು ದಿನದಿಂದ ಖಳನಾಯಕನನ್ನಾಗಿ ಬಿಂಬಿಸಲಾಗುತ್ತಿದೆ. ಸ್ನೇಹಿತರ ಮಾತಿನಿಂದ ನೋವಾಗಿದೆ’ ಎಂದು ಸಚಿವ ಸಿ.ಪಿ.ಯೋಗೇಶ್ವರ್ ಮಂಗಳವಾರ ರಾತ್ರಿ ಇಲ್ಲಿ ಪ್ರತಿಕ್ರಿಯಿಸಿದರು.</p>.<p>ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠಕ್ಕೆ ಪೊಲೀಸ್ ಬೆಂಗಾವಲು ಇಲ್ಲದೆ, ಖಾಸಗಿ ಕಾರಿನಲ್ಲಿ ದಿಢೀರ್ ಭೇಟಿ ನೀಡಿದ ಸಚಿವರು, ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಜೊತೆ ಗೋಪ್ಯ ಮಾತುಕತೆ ನಡೆಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು.</p>.<p>‘ನನ್ನ ಮನಸ್ಸಿನ ನೋವನ್ನು ಸ್ವಾಮೀಜಿ ಬಳಿ ಹೇಳಿಕೊಂಡೆ. ಮನಸ್ಸು ಹಗುರವಾಯಿತು. ಧಾರ್ಮಿಕ ಕ್ಷೇತ್ರದಲ್ಲಿ ರಾಜಕೀಯ ಮಾತನಾಡಲ್ಲ’ ಎಂದು ಕೈ ಮುಗಿದರು.</p>.<p>‘ಪೊಲೀಸ್ ಬೆಂಗಾವಲು, ಸರ್ಕಾರಿ ಕಾರಿನಲ್ಲಿ ಬರಲಿಲ್ಲ ಅಂದ್ರೆ ನಾನು ಸಚಿವನಲ್ವಾ’ ಎಂದ ಯೋಗೇಶ್ವರ್, ‘ಸಿನಿಮಾದಲ್ಲೂ ನಾನೇ ನಾಯಕ. ರಾಜಕೀಯದಲ್ಲೂ ನಾನೇ ನಾಯಕ’ ಎಂದು ಹೇಳಿದರು. ಪತ್ರಕರ್ತರ ಯಾವೊಂದು ಪ್ರಶ್ನೆಗೆ ಉತ್ತರಿಸದೆ ಬೇಸರದಿಂದಲೇ ಮಠದಿಂದ ಹೊರಟು ಹೋದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>