<p><strong>ಮೈಸೂರು:</strong> ಇಲ್ಲಿನ ಹೆಬ್ಬಾಳದ ಮೊದಲ ಹಂತದ ಮನೋಹರಸಿಂಗ್ ಎಂಬುವವರ ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು ₹ 65 ಲಕ್ಷ ಮೌಲ್ಯದ ಚಿನ್ನಾಭರಣಗಳು ಹಾಗೂ ₹ 1.4 ಲಕ್ಷ ನಗದನ್ನು ಕಳವು ಮಾಡಿದ್ದಾರೆ.</p>.<p>ಮನೋಹರಸಿಂಗ್ ಅವರು ಏ. 26ರಂದು ರಾಜಸ್ತಾನಕ್ಕೆ ತೆರಳಿದ್ದರು. ಪತ್ನಿ ಹಾಗೂ ಮಗು ಕುವೆಂಪುನಗರದ ತಾಯಿ ಮನೆಯಲ್ಲಿದ್ದರು. ಏ.28ರಂದು ವಾಪಸ್ ಮನೆಗೆ ಬಂದು ನೋಡಿದಾಗ ಕಳವಾಗಿರುವುದು ಗೊತ್ತಾಗಿದೆ. ಚಿನ್ನಾಭರಣಗಳ ಜತೆಗೆ ಬೀರುವಿನಲ್ಲಿದ್ದ ಆಸ್ತಿ ದಾಖಲೆ ಪತ್ರಗಳು, ಏರ್ಗನ್ ಸಹ ಕಳವಾಗಿದೆ.</p>.<p>ಸ್ಥಳಕ್ಕೆ ಶ್ವಾನದಳ ಮತ್ತು ಬೆರಳಚ್ಚು ತಜ್ಞರ ತಂಡ ತೆರಳಿ ಪರಿಶೀಲನೆ ನಡೆಸಿವೆ. ಹೆಬ್ಬಾಳು ಠಾಣೆಯಲ್ಲಿ ಪ್ರಕರಣ ದಾಖಲಾಗಿವೆ.</p>.<p><strong>ಡೀಸೆಲ್ ಹಾಕಿಸುವಾಗ ಹೃದಯಾಘಾತ; ಸಾವು</strong></p>.<p>ಮೈಸೂರು: ಡೀಸೆಲ್ ಹಾಕಿಸುವಾಗ ಹೃದಯಾಘಾತಕ್ಕೆ ಒಳಗಾಗಿ ಬೆಂಗಳೂರಿನ ಜೆ.ಸಿ.ನಗರದ ನಿವಾಸಿ ಎಂ.ವಿ.ಕೃಷ್ಣಕುಮಾರ್ (54) ಬುಧವಾರ ಮೃತಪಟ್ಟಿದ್ದಾರೆ.</p>.<p>ವೃತ್ತಿಯಲ್ಲಿ ಚಾಲಕರಾಗಿರುವ ಇವರು ಬಾಡಿಗೆ ಕಾರನ್ನು ಚಾಲನೆ ಮಾಡಿಕೊಂಡು ಬಂದು ಇಲ್ಲಿನ ಬೋಗಾದಿ ಬಳಿಯ ಪೆಟ್ರೊಲ್ ಬಂಕ್ನಲ್ಲಿ ಡಿಸೆಲ್ ಹಾಕಿಸುತ್ತಿದ್ದರು. ಈ ವೇಳೆ ಎದೆನೋವು ಕಾಣಿಸಿಕೊಂಡು ಕುಸಿದು ಬಿದ್ದಿದ್ದಾರೆ. ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಇವರು ಮೃತಪಟ್ಟಿದ್ದಾರೆ. ಇವರಿಗೆ ಕಳೆದ ಕೆಲ ದಿನಗಳಿಂದ ಎದೆನೋವು ಬರುತ್ತಿತ್ತು. ಗ್ಯಾಸ್ಟಿಕ್ ತೊಂದರೆ ಎಂದು ಭಾವಿಸಿ ಮಾತ್ರೆಗಳನ್ನು ತೆಗೆದುಕೊಂಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣ ಸರಸ್ವತಿಪುರಂ ಠಾಣೆಯಲ್ಲಿ ದಾಖಲಾಗಿದೆ.</p>.<p><strong>ವ್ಯಕ್ತಿ ಆತ್ಮಹತ್ಯೆ</strong></p>.<p>ಮೈಸೂರು: ಇಲ್ಲಿನ ಬೋಗಾದಿ ನಿವಾಸಿ ಜೆ.ಮಹದೇವ್ (25) ಅನಾರೋಗ್ಯದಿಂದ ಬೇಸತ್ತು ಬುಧವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p>.<p>ಪದೇ ಪದೇ ಆರೋಗ್ಯ ಹದಗೆಡುತ್ತಿತ್ತು. ಇದರಿಂದ ಇವರು ಬೇಸರಗೊಂಡಿದ್ದರು. ಹೀಗಾಗಿ, ಮನೆಯಲ್ಲಿ ಯಾರೂ ಇಲ್ಲದ ವೇಳೆ ಇವರು ನೇಣು ಹಾಕಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣ ಸರಸ್ವತಿಪುರಂ ಠಾಣೆಯಲ್ಲಿ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ಇಲ್ಲಿನ ಹೆಬ್ಬಾಳದ ಮೊದಲ ಹಂತದ ಮನೋಹರಸಿಂಗ್ ಎಂಬುವವರ ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು ₹ 65 ಲಕ್ಷ ಮೌಲ್ಯದ ಚಿನ್ನಾಭರಣಗಳು ಹಾಗೂ ₹ 1.4 ಲಕ್ಷ ನಗದನ್ನು ಕಳವು ಮಾಡಿದ್ದಾರೆ.</p>.<p>ಮನೋಹರಸಿಂಗ್ ಅವರು ಏ. 26ರಂದು ರಾಜಸ್ತಾನಕ್ಕೆ ತೆರಳಿದ್ದರು. ಪತ್ನಿ ಹಾಗೂ ಮಗು ಕುವೆಂಪುನಗರದ ತಾಯಿ ಮನೆಯಲ್ಲಿದ್ದರು. ಏ.28ರಂದು ವಾಪಸ್ ಮನೆಗೆ ಬಂದು ನೋಡಿದಾಗ ಕಳವಾಗಿರುವುದು ಗೊತ್ತಾಗಿದೆ. ಚಿನ್ನಾಭರಣಗಳ ಜತೆಗೆ ಬೀರುವಿನಲ್ಲಿದ್ದ ಆಸ್ತಿ ದಾಖಲೆ ಪತ್ರಗಳು, ಏರ್ಗನ್ ಸಹ ಕಳವಾಗಿದೆ.</p>.<p>ಸ್ಥಳಕ್ಕೆ ಶ್ವಾನದಳ ಮತ್ತು ಬೆರಳಚ್ಚು ತಜ್ಞರ ತಂಡ ತೆರಳಿ ಪರಿಶೀಲನೆ ನಡೆಸಿವೆ. ಹೆಬ್ಬಾಳು ಠಾಣೆಯಲ್ಲಿ ಪ್ರಕರಣ ದಾಖಲಾಗಿವೆ.</p>.<p><strong>ಡೀಸೆಲ್ ಹಾಕಿಸುವಾಗ ಹೃದಯಾಘಾತ; ಸಾವು</strong></p>.<p>ಮೈಸೂರು: ಡೀಸೆಲ್ ಹಾಕಿಸುವಾಗ ಹೃದಯಾಘಾತಕ್ಕೆ ಒಳಗಾಗಿ ಬೆಂಗಳೂರಿನ ಜೆ.ಸಿ.ನಗರದ ನಿವಾಸಿ ಎಂ.ವಿ.ಕೃಷ್ಣಕುಮಾರ್ (54) ಬುಧವಾರ ಮೃತಪಟ್ಟಿದ್ದಾರೆ.</p>.<p>ವೃತ್ತಿಯಲ್ಲಿ ಚಾಲಕರಾಗಿರುವ ಇವರು ಬಾಡಿಗೆ ಕಾರನ್ನು ಚಾಲನೆ ಮಾಡಿಕೊಂಡು ಬಂದು ಇಲ್ಲಿನ ಬೋಗಾದಿ ಬಳಿಯ ಪೆಟ್ರೊಲ್ ಬಂಕ್ನಲ್ಲಿ ಡಿಸೆಲ್ ಹಾಕಿಸುತ್ತಿದ್ದರು. ಈ ವೇಳೆ ಎದೆನೋವು ಕಾಣಿಸಿಕೊಂಡು ಕುಸಿದು ಬಿದ್ದಿದ್ದಾರೆ. ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಇವರು ಮೃತಪಟ್ಟಿದ್ದಾರೆ. ಇವರಿಗೆ ಕಳೆದ ಕೆಲ ದಿನಗಳಿಂದ ಎದೆನೋವು ಬರುತ್ತಿತ್ತು. ಗ್ಯಾಸ್ಟಿಕ್ ತೊಂದರೆ ಎಂದು ಭಾವಿಸಿ ಮಾತ್ರೆಗಳನ್ನು ತೆಗೆದುಕೊಂಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣ ಸರಸ್ವತಿಪುರಂ ಠಾಣೆಯಲ್ಲಿ ದಾಖಲಾಗಿದೆ.</p>.<p><strong>ವ್ಯಕ್ತಿ ಆತ್ಮಹತ್ಯೆ</strong></p>.<p>ಮೈಸೂರು: ಇಲ್ಲಿನ ಬೋಗಾದಿ ನಿವಾಸಿ ಜೆ.ಮಹದೇವ್ (25) ಅನಾರೋಗ್ಯದಿಂದ ಬೇಸತ್ತು ಬುಧವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p>.<p>ಪದೇ ಪದೇ ಆರೋಗ್ಯ ಹದಗೆಡುತ್ತಿತ್ತು. ಇದರಿಂದ ಇವರು ಬೇಸರಗೊಂಡಿದ್ದರು. ಹೀಗಾಗಿ, ಮನೆಯಲ್ಲಿ ಯಾರೂ ಇಲ್ಲದ ವೇಳೆ ಇವರು ನೇಣು ಹಾಕಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣ ಸರಸ್ವತಿಪುರಂ ಠಾಣೆಯಲ್ಲಿ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>