ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೆಡಿಎಸ್‌ನಲ್ಲಿ ಪ್ರಚಾರ ಮಾಡುವವರೇ ಇಲ್ಲ: ಎಸ್.ಟಿ. ಸೋಮಶೇಖರ್

Last Updated 8 ಜೂನ್ 2022, 12:57 IST
ಅಕ್ಷರ ಗಾತ್ರ

ಮೈಸೂರು:ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ಅವರು ಕಾಂಗ್ರೆಸ್‌, ಜೆಡಿಎಸ್‌ ವಿರುದ್ಧ ವಾಗ್ದಾಳಿ ನಡೆಸಿದರು.

‘ಜೆಡಿಎಸ್‌ನಲ್ಲಿ ಪ್ರಚಾರ ಮಾಡುವವರೇ ಇಲ್ಲ. ಆ ಪಕ್ಷದ ಪರವಾಗಿ ಹೋರಾಡಬೇಕಾದ ಒಬ್ಬರು ಸಿಂಗಾಪುರದಲ್ಲಿದ್ದಾರೆ; ಮತ್ತೊಬ್ಬರು ದುಬೈನಲ್ಲಿ ಕುಳಿತಿದ್ದಾರೆ. ಕಾಂಗ್ರೆಸ್‌ನಲ್ಲಿ ಪ್ರಚಾರ ಟೇಕಾಫೇ ಆಗಿಲ್ಲ. ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಅವರು ಟೇಕಾಫ್‌ ಮಾಡಲು ಹೋದರೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಕಾಲೆಳೆಯುತ್ತಿದ್ದಾರೆ’ ಎಂದು ಟೀಕಿಸಿದರು.

‘ಪಕ್ಷದಿಂದ ಪದವೀಧರರನ್ನು ವೈಯಕ್ತಿಕವಾಗಿ ಭೇಟಿಯಾಗಿ ಮತ ಯಾಚಿಸುತ್ತಿದ್ದೇವೆ. ನೋಂದಣಿಯಲ್ಲೂ ನಾವೇ ಮುಂದಿದ್ದೇವೆ. ಲ್ಯಾಂಡ್ ಮಾಫಿಯಾದಲ್ಲಿಲ್ಲದ ಹಾಗೂ ಕಪ್ಪುಚುಕ್ಕೆ ಇಲ್ಲದ ಅಭ್ಯರ್ಥಿ ಮೈ.ವಿ. ರವಿಶಂಕರ್‌ ಅವರನ್ನು ಕಣಕ್ಕಿಳಿಸಿದ್ದೇವೆ. ಅವರು 30 ವರ್ಷಗಳಿಂದ ಪಕ್ಷದಲ್ಲಿ ಕೆಲಸ ಮಾಡಿ ಎಲ್ಲರೊಂದಿಗೂ ಸಂಪರ್ಕದಲ್ಲಿದ್ದಾರೆ. ಸಂಘಟನೆಗೆ ಬಹಳ ದುಡಿದಿದ್ದಾರೆ. ಅವರ ಗೆಲುವಿಗೆ ನಾವೆಲ್ಲರೂ ಸಂಘಟಿತರಾಗಿ ಕೆಲಸ ಮಾಡುತ್ತಿದ್ದೇವೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT