ರಾಜಕೀಯ ಪ್ರೇರಿತ ದಾಳಿ ಎಂಬ ಕಾಂಗ್ರೆಸ್ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ‘ಕಾಂಗ್ರೆಸ್ನಲ್ಲಿ ಶಿವಕುಮಾರ್ ಮಾತ್ರ ಇದ್ದಾರೆಯೇ? ಐದು ವರ್ಷ ಮುಖ್ಯಮಂತ್ರಿ ಆಗಿದ್ದ ಸಿದ್ದರಾಮಯ್ಯ ಅವರ ನಿವಾಸದ ಮೇಲೆ ಏಕೆ ದಾಳಿ ನಡೆದಿಲ್ಲ? ಅವರಿಗಿಂತ ಸಿದ್ದರಾಮಯ್ಯ ಪ್ರಭಾವಿ ನಾಯಕರಲ್ಲವೇ? ಮಾಸ್ ಲೀಡರ್ ಅಲ್ಲವೇ? ಹೀಗಾಗಿ, ಯಾರನ್ನೂ ಟಾರ್ಗೆಟ್ ಮಾಡುತ್ತಿಲ್ಲ. ಭ್ರಷ್ಟಾಚಾರ ಆರೋಪ ಇರುವುದರಿಂದ ಶಿವಕುಮಾರ್ ನಿವಾಸದ ಮೇಲೆ ದಾಳಿ ನಡೆದಿದೆ. ರಾಜಕಾರಣಕ್ಕೂ ದಾಳಿಗೂ ಸಂಬಂಧ ಇಲ್ಲ. ರಾಜಕೀಯ ಹಸ್ತಕ್ಷೇಪದಲ್ಲಿ ಬಿಜೆಪಿ ನಂಬಿಕೆ ಒಟ್ಟುಕೊಡಿಲ್ಲ’ ಎಂದರು.