ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ವಿದ್ಯುತ್ ದೀಪಾಲಂಕಾರವನ್ನು ವೀಕ್ಷಿಸಲು ಸಾವಿರಾರು ಮಂದಿ ನಗರಕ್ಕೆ ಬರುತ್ತಿದ್ದಾರೆ. ಸಂಜೆ ಬಳಿಕ ವಾಹನ ದಟ್ಟಣೆ ಉಂಟಾಗುತ್ತಿದ್ದು, ಜನಜಂಗುಳಿ ಹೆಚ್ಚುತ್ತಿದೆ. ಇದರಿಂದ ಕೋವಿಡ್ ಮೂರನೇ ಅಲೆ ಬರುವ ಸಾಧ್ಯತೆ ಇದೆ’ ಎಂದು ಆತಂಕ ವ್ಯಕ್ತಪಡಿಸಿದರು.