<p><strong>ಮೈಸೂರು:</strong> ಯುವಕರು ತಮ್ಮ ಭವಿಷ್ಯವನ್ನು ಉತ್ತಮ ರೀತಿಯಲ್ಲಿ ರೂಪಿಸಿಕೊಳ್ಳಲು ಸಕಾರಾತ್ಮಕವಾಗಿ ಆಲೋಚನೆ ಮಾಡಬೇಕು ಎಂದು ದಕ್ಷಿಣ ವಲಯದ ಪೊಲೀಸ್ ಮಹಾನಿರೀಕ್ಷಕ ವಿಪುಲ್ ಕುಮಾರ್ ಸಲಹೆ ನೀಡಿದರು.</p>.<p>ನೆಹರೂಯುವ ಕೇಂದ್ರ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಯೋಗದಲ್ಲಿ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯ ಜನ್ಮದಿನಾಚರಣೆ ಅಂಗವಾಗಿ ಯೂತ್ ಹಾಸ್ಟೆಲ್ನಲ್ಲಿ ಗಾಂಧೀಜಿ ಹಾಗೂ ಶಾಸ್ತ್ರಿ ಭಾವಚಿತ್ರಕ್ಕೆ ಪುಷ್ಪಾರ್ಚನೆಮಾಡಿ ಮಾತನಾಡಿದರು.</p>.<p>‘ಯುವಜನರಿಗೆ ಜೀವನ ಕೌಶಲ ನಿರ್ವಹಣೆ’ ಕಾರ್ಯಕ್ರಮ ಉದ್ಘಾಟಿಸಿದ ಅವರು, ಮಾದಕ ವಸ್ತು ಮತ್ತು ಮದ್ಯಪಾನ ಸೇವನೆಯಿಂದ ಸಮಾಜದ ವಾತಾವರಣ ಹದಗೆಡುವುದರ ಜೊತೆಗೆ ಜೀವನವೂ ಹದಗೆಡುತ್ತದೆ. ಹೀಗಾಗಿ, ದುಶ್ಚಟಗಳಿಂದ ದೂರವಿರಿ ಎಂದು ಕಿವಿಮಾತು ಹೇಳಿದರು.</p>.<p>ಲೋಕಾಯುಕ್ತ ಪೊಲೀಸ್ ಅಧೀಕ್ಷಕಿ ಪಿ.ವಿ.ಸ್ನೇಹಾ, ನೆಹರೂ ಯುವ ಕೇಂದ್ರದ ಜಿಲ್ಲಾ ಸಂಯೋಜಕ ಎಸ್.ಸಿದ್ದರಾಮಪ್ಪ, ಮಹಾರಾಣಿ ಮಹಿಳಾ ಕಾಲೇಜಿನ ಪ್ರಾಧ್ಯಾಪಕಿ ಮನೋನ್ಮಣಿ, ಕ್ರೆಡಿಟ್-ಐ ಸಂಸ್ಥೆಯ ಎಂ.ಪಿ.ವರ್ಷ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ಯುವಕರು ತಮ್ಮ ಭವಿಷ್ಯವನ್ನು ಉತ್ತಮ ರೀತಿಯಲ್ಲಿ ರೂಪಿಸಿಕೊಳ್ಳಲು ಸಕಾರಾತ್ಮಕವಾಗಿ ಆಲೋಚನೆ ಮಾಡಬೇಕು ಎಂದು ದಕ್ಷಿಣ ವಲಯದ ಪೊಲೀಸ್ ಮಹಾನಿರೀಕ್ಷಕ ವಿಪುಲ್ ಕುಮಾರ್ ಸಲಹೆ ನೀಡಿದರು.</p>.<p>ನೆಹರೂಯುವ ಕೇಂದ್ರ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಯೋಗದಲ್ಲಿ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯ ಜನ್ಮದಿನಾಚರಣೆ ಅಂಗವಾಗಿ ಯೂತ್ ಹಾಸ್ಟೆಲ್ನಲ್ಲಿ ಗಾಂಧೀಜಿ ಹಾಗೂ ಶಾಸ್ತ್ರಿ ಭಾವಚಿತ್ರಕ್ಕೆ ಪುಷ್ಪಾರ್ಚನೆಮಾಡಿ ಮಾತನಾಡಿದರು.</p>.<p>‘ಯುವಜನರಿಗೆ ಜೀವನ ಕೌಶಲ ನಿರ್ವಹಣೆ’ ಕಾರ್ಯಕ್ರಮ ಉದ್ಘಾಟಿಸಿದ ಅವರು, ಮಾದಕ ವಸ್ತು ಮತ್ತು ಮದ್ಯಪಾನ ಸೇವನೆಯಿಂದ ಸಮಾಜದ ವಾತಾವರಣ ಹದಗೆಡುವುದರ ಜೊತೆಗೆ ಜೀವನವೂ ಹದಗೆಡುತ್ತದೆ. ಹೀಗಾಗಿ, ದುಶ್ಚಟಗಳಿಂದ ದೂರವಿರಿ ಎಂದು ಕಿವಿಮಾತು ಹೇಳಿದರು.</p>.<p>ಲೋಕಾಯುಕ್ತ ಪೊಲೀಸ್ ಅಧೀಕ್ಷಕಿ ಪಿ.ವಿ.ಸ್ನೇಹಾ, ನೆಹರೂ ಯುವ ಕೇಂದ್ರದ ಜಿಲ್ಲಾ ಸಂಯೋಜಕ ಎಸ್.ಸಿದ್ದರಾಮಪ್ಪ, ಮಹಾರಾಣಿ ಮಹಿಳಾ ಕಾಲೇಜಿನ ಪ್ರಾಧ್ಯಾಪಕಿ ಮನೋನ್ಮಣಿ, ಕ್ರೆಡಿಟ್-ಐ ಸಂಸ್ಥೆಯ ಎಂ.ಪಿ.ವರ್ಷ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>