<p><strong>ಮೈಸೂರು</strong>: ನಗರದಲ್ಲಿ ಶುಕ್ರವಾರ ನಡೆದ ಪ್ರತ್ಯೇಕ ಪ್ರಕರಣಗಳಲ್ಲಿ ಮೂವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p>.<p>ಇಲ್ಲಿನ ಮೇಟಗಳ್ಳಿಯ ಕಾರ್ಖಾನೆಯೊಂದರಲ್ಲಿ ವಾಸವಿದ್ದ ಅಸ್ಸಾಂನ ಕಾರ್ಮಿಕ ದೀಪಕ್ (28) ಶೌಚಾಲಯದಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರು ಕಳೆದ 3 ವರ್ಷಗಳಿಂದಲೂ ಅಸ್ಸಾಂಗೆ ತೆರಳದೆ ಇಲ್ಲೇ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡಿಕೊಂಡಿದ್ದರು. ಕಳೆದ ಕೆಲವು ದಿನಗಳಿಂದ ಅಸ್ವಸ್ಥರಾಗಿದ್ದರು ಎಂದು ಇವರ ಜತೆಯಲ್ಲಿದ್ದ ಸ್ನೇಹಿತರು ತಿಳಿಸಿದ್ದಾಗಿ ಪೊಲೀಸರು ಹೇಳಿದ್ದಾರೆ. ಪ್ರಕರಣ ಮೇಟಗಳ್ಳಿ ಠಾಣೆಯಲ್ಲಿ ದಾಖಲಾಗಿದೆ.</p>.<p>ಕಾಣೆಯಾಗಿದ್ದ ಮಹಿಳೆ ಶವ ಪತ್ತೆ</p>.<p>ಮೈಸೂರು: ಕಳೆದ ಕೆಲವು ದಿನಗಳಿಂದ ಕಾಣೆಯಾಗಿದ್ದ ಇಲ್ಲಿನ ವಿದ್ಯಾರಣ್ಯಾಪುರಂ ನಿವಾಸಿ ಗಂಗಾ (65) ಅವರ ಮೃತದೇಹ ನಂಜನಗೂಡಿನ ಸೇತುವೆ ಬಳಿ ಶುಕ್ರವಾರ ಪತ್ತೆಯಾಗಿದೆ. ಆತ್ಮಹತ್ಯೆಯ ಶಂಕೆ ಮೂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇವರ ನಾಪತ್ತೆ ಪ್ರಕರಣ ವಿದ್ಯಾರಣ್ಯಪುರಂನಲ್ಲಿ ದಾಖಲಾಗಿತ್ತು.</p>.<p>ಸೋದರನ ಮನೆಗೆ ಬಂದು ಆತ್ಮಹತ್ಯೆ</p>.<p>ಮೈಸೂರು: ತಲಕಾಡು ನಿವಾಸಿ ರಘು (42) ಇಲ್ಲಿನ ವಿದ್ಯಾರಣ್ಯಾಪುರಂನ ಮಿಲ್ಕ್ ರಸ್ತೆಯಲ್ಲಿರುವ ಸೋದರನ ಮನೆಗೆ ಬಂದು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣ ವಿದ್ಯಾರಣ್ಯಪುರಂ ಠಾಣೆಯಲ್ಲಿ ದಾಖಲಾಗಿದೆ.</p>.<p>ಬುಲೆಟ್ ನಾಪತ್ತೆ ಪ್ರಕರಣ; ಆರೋಪಿ ನ್ಯಾಯಾಂಗ ಬಂಧನಕ್ಕೆ</p>.<p>ಮೈಸೂರು: ತಿ.ನರಸೀಪುರ ಠಾಣೆಯಲ್ಲಿ ಬುಲೆಟ್ಗಳು ನಾಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿದ್ದ ಹೆಡ್ಕಾನ್ಸ್ಟೆಬಲ್ ಕೃಷ್ಣೇಗೌಡನನ್ನು ಶುಕ್ರವಾರ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ನಗರದಲ್ಲಿ ಶುಕ್ರವಾರ ನಡೆದ ಪ್ರತ್ಯೇಕ ಪ್ರಕರಣಗಳಲ್ಲಿ ಮೂವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p>.<p>ಇಲ್ಲಿನ ಮೇಟಗಳ್ಳಿಯ ಕಾರ್ಖಾನೆಯೊಂದರಲ್ಲಿ ವಾಸವಿದ್ದ ಅಸ್ಸಾಂನ ಕಾರ್ಮಿಕ ದೀಪಕ್ (28) ಶೌಚಾಲಯದಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರು ಕಳೆದ 3 ವರ್ಷಗಳಿಂದಲೂ ಅಸ್ಸಾಂಗೆ ತೆರಳದೆ ಇಲ್ಲೇ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡಿಕೊಂಡಿದ್ದರು. ಕಳೆದ ಕೆಲವು ದಿನಗಳಿಂದ ಅಸ್ವಸ್ಥರಾಗಿದ್ದರು ಎಂದು ಇವರ ಜತೆಯಲ್ಲಿದ್ದ ಸ್ನೇಹಿತರು ತಿಳಿಸಿದ್ದಾಗಿ ಪೊಲೀಸರು ಹೇಳಿದ್ದಾರೆ. ಪ್ರಕರಣ ಮೇಟಗಳ್ಳಿ ಠಾಣೆಯಲ್ಲಿ ದಾಖಲಾಗಿದೆ.</p>.<p>ಕಾಣೆಯಾಗಿದ್ದ ಮಹಿಳೆ ಶವ ಪತ್ತೆ</p>.<p>ಮೈಸೂರು: ಕಳೆದ ಕೆಲವು ದಿನಗಳಿಂದ ಕಾಣೆಯಾಗಿದ್ದ ಇಲ್ಲಿನ ವಿದ್ಯಾರಣ್ಯಾಪುರಂ ನಿವಾಸಿ ಗಂಗಾ (65) ಅವರ ಮೃತದೇಹ ನಂಜನಗೂಡಿನ ಸೇತುವೆ ಬಳಿ ಶುಕ್ರವಾರ ಪತ್ತೆಯಾಗಿದೆ. ಆತ್ಮಹತ್ಯೆಯ ಶಂಕೆ ಮೂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇವರ ನಾಪತ್ತೆ ಪ್ರಕರಣ ವಿದ್ಯಾರಣ್ಯಪುರಂನಲ್ಲಿ ದಾಖಲಾಗಿತ್ತು.</p>.<p>ಸೋದರನ ಮನೆಗೆ ಬಂದು ಆತ್ಮಹತ್ಯೆ</p>.<p>ಮೈಸೂರು: ತಲಕಾಡು ನಿವಾಸಿ ರಘು (42) ಇಲ್ಲಿನ ವಿದ್ಯಾರಣ್ಯಾಪುರಂನ ಮಿಲ್ಕ್ ರಸ್ತೆಯಲ್ಲಿರುವ ಸೋದರನ ಮನೆಗೆ ಬಂದು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣ ವಿದ್ಯಾರಣ್ಯಪುರಂ ಠಾಣೆಯಲ್ಲಿ ದಾಖಲಾಗಿದೆ.</p>.<p>ಬುಲೆಟ್ ನಾಪತ್ತೆ ಪ್ರಕರಣ; ಆರೋಪಿ ನ್ಯಾಯಾಂಗ ಬಂಧನಕ್ಕೆ</p>.<p>ಮೈಸೂರು: ತಿ.ನರಸೀಪುರ ಠಾಣೆಯಲ್ಲಿ ಬುಲೆಟ್ಗಳು ನಾಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿದ್ದ ಹೆಡ್ಕಾನ್ಸ್ಟೆಬಲ್ ಕೃಷ್ಣೇಗೌಡನನ್ನು ಶುಕ್ರವಾರ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>