‘ಕುವೆಂಪುನಗರದ ನಿವಾಸಿಯಾದ ಇವರು ರಿಯಲ್ಎಸ್ಟೇಟ್ ವ್ಯವಹಾರ ಹಾಗೂ ಪ್ರಿಂಟಿಂಗ್ ಪ್ರೆಸ್ ನಡೆಸುತ್ತಿದ್ದರು. ಲಾಕ್ಡೌನ್ ನಂತರ ಎರಡೂ ವ್ಯವಹಾರಗಳಲ್ಲಿ ನಷ್ಟ ಸಂಭವಿಸಿತ್ತು. ಇದರಿಂದ ಬೇಸರಗೊಂಡು ಜೂನ್ 30ರಂದು ಖಾಸಗಿ ಹೋಟೆಲ್ನಲ್ಲಿ ತಂಗಿದ್ದಾರೆ. ಜುಲೈ 2ರಿಂದ ಇವರ ಫೋನ್ ಸ್ವಿಚ್ ಆಫ್ ಆಗಿದೆ. ಕೋಣೆಯ ಬಾಗಿಲು ತೆರೆಯದೇ ಇದ್ದಾಗ ಹೋಟೆಲ್ನವರ ಮಾಹಿತಿ ಆಧರಿಸಿ ಬಾಗಿಲು ತೆರೆದಾಗ ನೇಣು ಹಾಕಿಕೊಂಡಿರುವುದು ಗೊತ್ತಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ. ಲಕ್ಷ್ಮೀಪುರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.