<p><strong>ಮೈಸೂರು: </strong>ಮೈಸೂರಿನ ಮಹಾರಾಜ ಕಾಲೇಜಿನ ಚಾವಣಿ ಕುಸಿದು, ಮೂವರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ.</p>.<p>ವಿಶಾಲ್, ಯಶವಂತ್ ಹಾಗೂ ಸಲೀಂ ಗಾಯಗೊಂಡವರು. ತಲೆ ಹಾಗೂ ಮುಖಕ್ಕೆ ಏಟು ಬಿದ್ದಿದ್ದು, ಇವರನ್ನು ಕಾಮಾಕ್ಷಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಒಬ್ಬ ವಿದ್ಯಾರ್ಥಿಯ ತಲೆಗೆ ಗಂಭೀರವಾಗಿ ಪೆಟ್ಟಾಗಿದ್ದು, ವೈದ್ಯರು ಹೊಲಿಗೆ ಹಾಕಿದ್ದಾರೆ.</p>.<p>ಮೈಸೂರು ವಿಶ್ವವಿದ್ಯಾಲಯದ ಕುಲಸಚಿವ ಪ್ರೊ.ಆರ್.ಶಿವಪ್ಪ, ಕಾಲೇಜಿನ ಪ್ರಾಂಶುಪಾಲರಾದ ಅನಿತಾ ಹಾಗೂ ಉಪನ್ಯಾಸಕರು ಆಸ್ಪತ್ರೆಗೆ ಭೇಟಿ ನೀಡಿ ಚಿಕಿತ್ಸೆ ಕೊಡಿಸುತ್ತಿದ್ದಾರೆ.</p>.<p>ಬುಧವಾರ ಬೆಳಿಗ್ಗೆ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾಗ ಈ ದುರಂತ ಸಂಭವಿಸಿದೆ. ಕಟ್ಟಡದಲ್ಲಿ ದುರಸ್ತಿ ಕಾರ್ಯ ನಡೆಯುತ್ತಿದ್ದು,ಇದರಿಂದ ಏಕಾಏಕಿ ಚಾವಣಿಯ ಗಾರೆ ಕಳಚಿ ಬಿದ್ದಿದೆ.</p>.<p>‘ಹಳೇ ಕಟ್ಟಡ ಇದಾಗಿದ್ದು, ಬೇರೆ ಕಡೆತರಗತಿಗಳನ್ನು ನಡೆಸಲು ನಿರ್ಧರಿಸಲಾಗಿದೆ. ವಿದ್ಯಾರ್ಥಿಗಳಿಗೆಕಾಲೇಜು ವತಿಯಿಂದಲೇಚಿಕಿತ್ಸೆ ಕೊಡಿಸಲಾಗುತ್ತಿದೆ. ಯಾವುದೇ ತೊಂದರೆ ಇಲ್ಲ. ವಿದ್ಯಾರ್ಥಿಗಳ ಪೋಷಕರು ಕೂಡ ಬಂದಿದ್ದಾರೆ. ನಮ್ಮ ಸಿಬ್ಬಂದಿ ಕೂಡ ಆಸ್ಪತ್ರೆಯಲ್ಲೇ ಇದ್ದು ಕಾಳಜಿ ವಹಿಸುತ್ತಿದ್ದಾರೆ’ ಎಂದು ಪ್ರೊ.ಆರ್.ಶಿವಪ್ಪ ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು: </strong>ಮೈಸೂರಿನ ಮಹಾರಾಜ ಕಾಲೇಜಿನ ಚಾವಣಿ ಕುಸಿದು, ಮೂವರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ.</p>.<p>ವಿಶಾಲ್, ಯಶವಂತ್ ಹಾಗೂ ಸಲೀಂ ಗಾಯಗೊಂಡವರು. ತಲೆ ಹಾಗೂ ಮುಖಕ್ಕೆ ಏಟು ಬಿದ್ದಿದ್ದು, ಇವರನ್ನು ಕಾಮಾಕ್ಷಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಒಬ್ಬ ವಿದ್ಯಾರ್ಥಿಯ ತಲೆಗೆ ಗಂಭೀರವಾಗಿ ಪೆಟ್ಟಾಗಿದ್ದು, ವೈದ್ಯರು ಹೊಲಿಗೆ ಹಾಕಿದ್ದಾರೆ.</p>.<p>ಮೈಸೂರು ವಿಶ್ವವಿದ್ಯಾಲಯದ ಕುಲಸಚಿವ ಪ್ರೊ.ಆರ್.ಶಿವಪ್ಪ, ಕಾಲೇಜಿನ ಪ್ರಾಂಶುಪಾಲರಾದ ಅನಿತಾ ಹಾಗೂ ಉಪನ್ಯಾಸಕರು ಆಸ್ಪತ್ರೆಗೆ ಭೇಟಿ ನೀಡಿ ಚಿಕಿತ್ಸೆ ಕೊಡಿಸುತ್ತಿದ್ದಾರೆ.</p>.<p>ಬುಧವಾರ ಬೆಳಿಗ್ಗೆ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾಗ ಈ ದುರಂತ ಸಂಭವಿಸಿದೆ. ಕಟ್ಟಡದಲ್ಲಿ ದುರಸ್ತಿ ಕಾರ್ಯ ನಡೆಯುತ್ತಿದ್ದು,ಇದರಿಂದ ಏಕಾಏಕಿ ಚಾವಣಿಯ ಗಾರೆ ಕಳಚಿ ಬಿದ್ದಿದೆ.</p>.<p>‘ಹಳೇ ಕಟ್ಟಡ ಇದಾಗಿದ್ದು, ಬೇರೆ ಕಡೆತರಗತಿಗಳನ್ನು ನಡೆಸಲು ನಿರ್ಧರಿಸಲಾಗಿದೆ. ವಿದ್ಯಾರ್ಥಿಗಳಿಗೆಕಾಲೇಜು ವತಿಯಿಂದಲೇಚಿಕಿತ್ಸೆ ಕೊಡಿಸಲಾಗುತ್ತಿದೆ. ಯಾವುದೇ ತೊಂದರೆ ಇಲ್ಲ. ವಿದ್ಯಾರ್ಥಿಗಳ ಪೋಷಕರು ಕೂಡ ಬಂದಿದ್ದಾರೆ. ನಮ್ಮ ಸಿಬ್ಬಂದಿ ಕೂಡ ಆಸ್ಪತ್ರೆಯಲ್ಲೇ ಇದ್ದು ಕಾಳಜಿ ವಹಿಸುತ್ತಿದ್ದಾರೆ’ ಎಂದು ಪ್ರೊ.ಆರ್.ಶಿವಪ್ಪ ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>