ಗಾಳಿಯಿಂದ ಮರದ ಸಣ್ಣ ಕಡ್ಡಿಗಳು, ರೆಂಬೆಗಳು ವಿದ್ಯುತ್ ತಂತಿಗೆ ತಗುಲಿದ್ದರಿಂದ ಬನ್ನಿಮಂಟಪ, ಎನ್.ಆರ್.ಮೊಹಲ್ಲಾ, ವಿದ್ಯಾರಣ್ಯಪುರ, ರಾಮಾನುಜ ರಸ್ತೆ ಸೇರಿದಂತೆ ಹಲವೆಡೆ ವಿದ್ಯುತ್ ಪೂರೈಕೆ ವ್ಯವಸ್ಥೆಯಲ್ಲಿ ವ್ಯತ್ಯಯ ಉಂಟಾಯಿತು. ಆದರೆ, ದೂರು ಸ್ವೀಕರಿಸುತ್ತಿದ್ದಂತೆ ಸ್ಥಳಕ್ಕೆ ಬಂದ ಸೆಸ್ಕ್ ಸಿಬ್ಬಂದಿ ಸಮಸ್ಯೆಗಳನ್ನು ಸರಿಪಡಿಸಿದರು.