ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೆರೆ ಸಿಕ್ಕ ಹುಲಿಗೆ ಚಿಕಿತ್ಸೆ

Last Updated 14 ಅಕ್ಟೋಬರ್ 2019, 14:14 IST
ಅಕ್ಷರ ಗಾತ್ರ

ಮೈಸೂರು: ಗುಂಡ್ಲುಪೇಟೆಯಲ್ಲಿ ಸೆರೆ ಸಿಕ್ಕ ನರಭಕ್ಷಕ ಹುಲಿಯನ್ನು ಇಲ್ಲಿನ ಚಾಮರಾಜೇಂದ್ರ ಮೃಗಾಲಯಕ್ಕೆ ಸೇರಿದ ಕೂರ್ಗಳ್ಳಿಯಲ್ಲಿರುವ ಚಾಮುಂಡಿ ವನ್ಯಜೀವಿ ಸಂರಕ್ಷಣಾ ಮತ್ತು ಪುನರ್ವಸತಿ ಕೇಂದ್ರದಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಈ ಕುರಿತು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಮೃಗಾಲಯದ ಪಶುವೈದ್ಯ ಡಾ.ರಮೇಶ್, ‘ಹುಲಿಯು ನೆನ್ನೆಯಷ್ಟೇ ಬಂದಿದೆ. ಇದರ ಮೇಲೆ ನಿಗಾ ಇರಿಸಲಾಗಿದೆ. ಈಗಲೇ ಏನನ್ನೂ ಹೇಳಲು ಸಾಧ್ಯವಿಲ್ಲ’ ಎಂದು ಹೇಳಿದರು.

‌ಚಾಮರಾಜೇಂದ್ರ ಮೃಗಾಲಯದ ಕಾರ್ಯನಿರ್ವಾಹಕ ನಿರ್ದೇಶಕ ಅಜಿತ್‌ ಕುಲಕರ್ಣಿ ಮಾತನಾಡಿ, ‘ಹುಲಿ ಮೊದಲು ಈ ವಾತಾವರಣಕ್ಕೆ ಹೊಂದಿಕೊಳ್ಳಬೇಕು. ನಂತರವಷ್ಟೇ ಅದನ್ನು ಏನು ಮಾಡಬೇಕು ಎಂದು ಚಿಂತನೆ ನಡೆಸಲಾಗುವುದು. ಇನ್ನೂ ಒಂದಷ್ಟು ಅದನ್ನು ಪುನರ್ವಸತಿ ಕೇಂದ್ರದಲ್ಲಿಯೇ ಇರಿಸಿಕೊಳ್ಳಲಾಗುವುದು’ ಎಂದು ತಿಳಿಸಿದರು.

ಮೃಗಾಲಯದ ಹುಲಿ ಸೇರಿದಂತೆ ಈಚೆಗೆ ನಾಗರಹೊಳೆ ಹಾಗೂ ಇತರೆಡೆ ಸೆರೆ ಹಿಡಿದ ಹುಲಿಗಳೂ ಸೇರಿದಂತೆ ಒಟ್ಟು 6 ಹುಲಿಗಳು ಪುನರ್ವಸತಿ ಕೇಂದ್ರದಲ್ಲಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT