<p><strong>ಹುಣಸೂರು:</strong> ನಾಗರಹೊಳೆ ಹುಲಿ ರಕ್ಷಿತಾರಣ್ಯದ ಕಲ್ಲಹಳ್ಳ ವಲಯದಲ್ಲಿ ಆ .26ರಂದು ನಡೆದ ಹುಲಿ ಹತ್ಯೆ ಪ್ರಕರಣಕ್ಕೆ ಮತ್ತಿಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಬಂಧಿತರ ಸಂಖ್ಯೆ 5ಕ್ಕೆ ಏರಿದೆ ಎಂದು ನಾಗರಹೊಳೆ ಹುಲಿ ಯೋಜನಾ ನಿರ್ದೇಶಕ ಮಹೇಶ್ ಕುಮಾರ್ ತಿಳಿಸಿದರು.</p>.<p>ಅರಣ್ಯದಲ್ಲಿ ಹುಲಿಯನ್ನು ಹತ್ಯೆ ಮಾಡಿದ ಆರೋಪಿ ಸಂತೋಷ್ ನೀಡಿದ ಮಾಹಿತಿ ಮೇಲೆ ಶ್ವಾನದಳ ಬಳಸಿ ಇತರೆ ನಾಲ್ವರು ಆರೋಪಿಗಳನ್ನು ಬಂಧಿಸಲಾಯಿತು ಎಂದು ಅವರು ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು.</p>.<p>ತಟ್ಟೆಕರೆ ಹಾಡಿಯ ಸಂತೋಷ್, ಸುಳುಗೋಡು ಗ್ರಾಮದ ಕಾಂಡೇರ ಶಶಿ, ಕೆ.ಪಿ.ಉತ್ತಪ್ಪ, ನಿಟ್ಟೂರು ಗ್ರಾಮದ ವಟ್ಟಂಗಡ ರಂಜು ಹಾಗೂ ಕೆ.ಎನ್.ರಾಜು ಬಂಧಿತರು.</p>.<p>ಆರೋಪಿಗಳಿಂದ ಹುಲಿಯ 13 ಉಗುರು ಹಾಗೂ 2 ಕೋರೆ ಹಲ್ಲು ಸೇರಿದಂತೆ 2 ಬೈಕ್ ಮತ್ತು ಮಾರಕಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ ಎಂದರು.</p>.<p>ಈ ಪೈಕಿ ಕೆ.ಎನ್ ರಾಜು ಹತ್ತು ವರ್ಷದ ಹಿಂದೆ ಬೇಟೆ ಪ್ರಕರಣದಲ್ಲಿ ಭಾಗಿಯಾಗಿರುವುದು ತಿಳಿದು ಬಂದಿದೆ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಣಸೂರು:</strong> ನಾಗರಹೊಳೆ ಹುಲಿ ರಕ್ಷಿತಾರಣ್ಯದ ಕಲ್ಲಹಳ್ಳ ವಲಯದಲ್ಲಿ ಆ .26ರಂದು ನಡೆದ ಹುಲಿ ಹತ್ಯೆ ಪ್ರಕರಣಕ್ಕೆ ಮತ್ತಿಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಬಂಧಿತರ ಸಂಖ್ಯೆ 5ಕ್ಕೆ ಏರಿದೆ ಎಂದು ನಾಗರಹೊಳೆ ಹುಲಿ ಯೋಜನಾ ನಿರ್ದೇಶಕ ಮಹೇಶ್ ಕುಮಾರ್ ತಿಳಿಸಿದರು.</p>.<p>ಅರಣ್ಯದಲ್ಲಿ ಹುಲಿಯನ್ನು ಹತ್ಯೆ ಮಾಡಿದ ಆರೋಪಿ ಸಂತೋಷ್ ನೀಡಿದ ಮಾಹಿತಿ ಮೇಲೆ ಶ್ವಾನದಳ ಬಳಸಿ ಇತರೆ ನಾಲ್ವರು ಆರೋಪಿಗಳನ್ನು ಬಂಧಿಸಲಾಯಿತು ಎಂದು ಅವರು ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು.</p>.<p>ತಟ್ಟೆಕರೆ ಹಾಡಿಯ ಸಂತೋಷ್, ಸುಳುಗೋಡು ಗ್ರಾಮದ ಕಾಂಡೇರ ಶಶಿ, ಕೆ.ಪಿ.ಉತ್ತಪ್ಪ, ನಿಟ್ಟೂರು ಗ್ರಾಮದ ವಟ್ಟಂಗಡ ರಂಜು ಹಾಗೂ ಕೆ.ಎನ್.ರಾಜು ಬಂಧಿತರು.</p>.<p>ಆರೋಪಿಗಳಿಂದ ಹುಲಿಯ 13 ಉಗುರು ಹಾಗೂ 2 ಕೋರೆ ಹಲ್ಲು ಸೇರಿದಂತೆ 2 ಬೈಕ್ ಮತ್ತು ಮಾರಕಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ ಎಂದರು.</p>.<p>ಈ ಪೈಕಿ ಕೆ.ಎನ್ ರಾಜು ಹತ್ತು ವರ್ಷದ ಹಿಂದೆ ಬೇಟೆ ಪ್ರಕರಣದಲ್ಲಿ ಭಾಗಿಯಾಗಿರುವುದು ತಿಳಿದು ಬಂದಿದೆ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>