<p><strong>ಹುಣಸೂರು: </strong>ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯಲ್ಲಿ ಈಚೆಗೆ ಹುಲಿ ಬೇಟೆಯಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಆರೋಪಿಯನ್ನು ಬಂಧಿಸಲಾಗಿದೆ.</p>.<p>‘ಆರೋಪಿ ವಟ್ಟಂಗಡ ರಾಜು ಎಂಬಾತನನ್ನು ರಾಮನಗರ ಪಟ್ಟಣದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಬಳಿ ಬಂಧಿಸಲಾಯಿತು. ಈತ ನೀಡಿದ ಮಾಹಿತಿ ಮೇರೆಗೆ ಕೊಡಗಿನ ವಿಶ್ವನಾಥ್ ಅವರ ಕಾಫಿ ತೋಟದಲ್ಲಿ ಹೂತ್ತಿಟ್ಟ 4 ಉಗುರು ಮತ್ತು 2 ಕೋರೆ ಹಲ್ಲುಗಳನ್ನು ವಶಕ್ಕೆ ಪಡೆಯಲಾಗಿದೆ’ ಎಂದು ಹುಲಿ ಯೋಜನಾ ನಿರ್ದೇಶಕ ಮಹೇಶ್ ಕುಮಾರ್ ತಿಳಿಸಿದ್ದಾರೆ.</p>.<p>ನಾಗರಹೊಳೆ ಅರಣ್ಯದ ಕಲ್ಲಹಳ್ಳ ವಲಯದ ತಟ್ಟೆಕೆರೆ ಹಾಡಿ ಬಳಿ ಆ. 26ರಂದು ಹುಲಿಯೊಂದನ್ನು ಬೇಟೆಯಾಡಿ, ಅದರ 4 ಕಾಲುಗಳ ಉಗುರುಗಳು ಮತ್ತು ಕೋರೆ ಹಲ್ಲುಗಳನ್ನು ಅಪಹರಿಸಲಾಗಿತ್ತು. ಈ ಸಂಬಂಧ ಒಬ್ಬ ಆರೋಪಿಯನ್ನು ಘಟನೆ ನಡೆದ ಮರುದಿನವೇ ಬಂಧಿಸಲಾಗಿತ್ತು. ಇನ್ನೂ ಇಬ್ಬರ ಪತ್ತೆಗಾಗಿ ಶೋಧ ಕಾರ್ಯ ನಡೆದಿದೆ.</p>.<p>ಕಾರ್ಯಾಚರಣೆಯಲ್ಲಿ ನಾಗರಹೊಳೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪಾಲ್ ಆಂಥೋಣಿ, ಆರ್ಎಫ್ಒ ಗಿರೀಶ್ ಪಿ.ಚೌಗಲೆ, ಎಂ.ಸಿ.ಯೋಗೇಶ್ ಭರಮಪ್ಪ, ಗಣೇಶ್, ನಿರಾಲ್ ಕುಮಾರ್ ಮತ್ತು ಬಸವರಾಜು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಣಸೂರು: </strong>ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯಲ್ಲಿ ಈಚೆಗೆ ಹುಲಿ ಬೇಟೆಯಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಆರೋಪಿಯನ್ನು ಬಂಧಿಸಲಾಗಿದೆ.</p>.<p>‘ಆರೋಪಿ ವಟ್ಟಂಗಡ ರಾಜು ಎಂಬಾತನನ್ನು ರಾಮನಗರ ಪಟ್ಟಣದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಬಳಿ ಬಂಧಿಸಲಾಯಿತು. ಈತ ನೀಡಿದ ಮಾಹಿತಿ ಮೇರೆಗೆ ಕೊಡಗಿನ ವಿಶ್ವನಾಥ್ ಅವರ ಕಾಫಿ ತೋಟದಲ್ಲಿ ಹೂತ್ತಿಟ್ಟ 4 ಉಗುರು ಮತ್ತು 2 ಕೋರೆ ಹಲ್ಲುಗಳನ್ನು ವಶಕ್ಕೆ ಪಡೆಯಲಾಗಿದೆ’ ಎಂದು ಹುಲಿ ಯೋಜನಾ ನಿರ್ದೇಶಕ ಮಹೇಶ್ ಕುಮಾರ್ ತಿಳಿಸಿದ್ದಾರೆ.</p>.<p>ನಾಗರಹೊಳೆ ಅರಣ್ಯದ ಕಲ್ಲಹಳ್ಳ ವಲಯದ ತಟ್ಟೆಕೆರೆ ಹಾಡಿ ಬಳಿ ಆ. 26ರಂದು ಹುಲಿಯೊಂದನ್ನು ಬೇಟೆಯಾಡಿ, ಅದರ 4 ಕಾಲುಗಳ ಉಗುರುಗಳು ಮತ್ತು ಕೋರೆ ಹಲ್ಲುಗಳನ್ನು ಅಪಹರಿಸಲಾಗಿತ್ತು. ಈ ಸಂಬಂಧ ಒಬ್ಬ ಆರೋಪಿಯನ್ನು ಘಟನೆ ನಡೆದ ಮರುದಿನವೇ ಬಂಧಿಸಲಾಗಿತ್ತು. ಇನ್ನೂ ಇಬ್ಬರ ಪತ್ತೆಗಾಗಿ ಶೋಧ ಕಾರ್ಯ ನಡೆದಿದೆ.</p>.<p>ಕಾರ್ಯಾಚರಣೆಯಲ್ಲಿ ನಾಗರಹೊಳೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪಾಲ್ ಆಂಥೋಣಿ, ಆರ್ಎಫ್ಒ ಗಿರೀಶ್ ಪಿ.ಚೌಗಲೆ, ಎಂ.ಸಿ.ಯೋಗೇಶ್ ಭರಮಪ್ಪ, ಗಣೇಶ್, ನಿರಾಲ್ ಕುಮಾರ್ ಮತ್ತು ಬಸವರಾಜು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>