ಹುಲಿ ಚರ್ಮ ಸಾಗಿಸುತ್ತಿರುವ ಬಗ್ಗೆ ಖಚಿತ ಮಾಹಿತಿ ಆಧರಿಸಿ, ಡಿಸಿಎಫ್ ಎ.ಟಿ.ಪೂವಯ್ಯ ನೇತೃತ್ವದ ತಂಡವು ದಾಳಿಗೆ ಹೊಂಚು ಹಾಕಿತ್ತು. ಇದೇ ವೇಳೆ ಕೆಆರ್ಎಸ್ ಕಡೆಯಿಂದ ಮೈಸೂರು ನಗರಕ್ಕೆ ಬರುತ್ತಿದ್ದ ಕೆಂಪು ಬಣ್ಣದ ಕಾರನ್ನು ತಡೆದು ಪರಿಶೀಲಿಸಿದಾಗ ಹುಲಿಯ ಚರ್ಮ ಪತ್ತೆಯಾಗಿದೆ. ಮೇಲ್ನೋಟಕ್ಕೆ, ಈ ಚರ್ಮವು ಹಲವು ವರ್ಷಗಳಷ್ಟು ಹಳೆಯದ್ದು ಎಂದು ಕಂಡು ಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.