ಹುಣಸೂರು: ತಾಲ್ಲೂಕಿನ ನಾಗಮಂಗಲ ಗ್ರಾಮಕ್ಕೆ ಹೊಂದಿಕೊಂಡಿರುವ ಮಯತ್ತುರಾಯನ ಹೊಸಹಳ್ಳಿ ಮೀಸಲು ಅರಣ್ಯದಿಂದ ಹೊರ ಬಂದ ಹುಲಿಯೊಂದು ಕಾಣಿಸಿಕೊಂಡಿದೆ ಎಂದು ಸ್ಥಳೀಯ ನಿವಾಸಿ ದೇವರಾಜ್ ತಿಳಿಸಿದ್ದಾರೆ.
ಶೋಭಾ ಹರೀಶ್ ಅವರಿಗೆ ಸೇರಿದ ಹೊಲದಲ್ಲಿ ಉಳುಮೆ ಮಾಡಲು ತೆರಳಿದವರಿಗೆ ಜಮೀನಿಗೆ ಹೊಂದಿಕೊಂಡಿರುವ ಅರಣ್ಯದಂಚಿನಲ್ಲಿ ಹುಲಿ ಮಲಗಿರುವುದು ಗೋಚರಿಸಿದೆ ಎಂದು ತಿಳಿಸಿದ್ದಾರೆ.
ಎರಡು ತಿಂಗಳಲ್ಲಿ ಹುಲಿ ದಾಳಿಗೆ ಗೋವಿಂದ ಮತ್ತು ಸ್ವಾಮಿ ಅವರಿಗೆ ಸೇರಿದ ಹಸು ಬಲಿಯಾಗಿದ್ದು, ಅರಣ್ಯ ಇಲಾಖೆಗೆ ದೂರು ನೀಡಲಾಗಿದೆ. ಹುಲಿ ದಾಳಿಗೆ ಬಲಿಯಾದ ಹಸುವಿಗೆ ಇಲಾಖೆಯಿಂದ ಯಾವುದೇ ಪರಿಹಾರ ಸಿಕ್ಕಿಲ್ಲ ಎಂದು ತಿಳಿಸಿದ್ದಾರೆ
ಅರಣ್ಯದಂಚಿನಲ್ಲಿ ಕಾಣಿಸಿದ ಹುಲಿ ಸೆರೆಗೆ ಬೋನು ಇಡಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.