ಬೂದಿತಿಟ್ಟು: ಹುಲಿ ಹೆಜ್ಜೆ ಪತ್ತೆ

ಪಿರಿಯಾಪಟ್ಟಣ: ಕಾಡಂಚಿನ ಗ್ರಾಮವಾದ ಬೂದಿತಿಟ್ಟು ಗ್ರಾಮದ ಜಮೀನಿನಲ್ಲಿ ಭಾನುವಾರ ಬೆಳಿಗ್ಗೆ ಹುಲಿ ಸಂಚರಿಸಿದ ಕುರುಹು ಪತ್ತೆಯಾಗಿದ್ದು ಗ್ರಾಮಸ್ಥರಲ್ಲಿ ಭಯವುಂಟು ಮಾಡಿದೆ.
ನಾಗರಹೊಳೆ ರಾಜೀವ್ ಗಾಂಧಿ ರಾಷ್ಟ್ರೀಯ ಉದ್ಯಾನಕ್ಕೆ ಹೊಂದಿಕೊಂಡಿರುವ ಗ್ರಾಮಗಳಾದ ಲಕ್ಷ್ಮೀಪುರ, ಹಬಟೂರು, ಬೂದಿತಿಟ್ಟು ಗ್ರಾಮಗಳಲ್ಲಿ ಹುಲಿಯು ಸಂಚರಿಸುತ್ತಿದ್ದು ಭಾನುವಾರ ಬೆಳಿಗ್ಗೆ 6 ಗಂಟೆ ಸಮಯದಲ್ಲಿ ಗ್ರಾಮದಲ್ಲಿ ಮತ್ತು 11 ಗಂಟೆ ಸಮಯದಲ್ಲಿ ಗ್ರಾಮದ ಹೊರವಲಯದಲ್ಲಿರುವ ಶಾಲೆಯೊಂದರ ಬಳಿ ಜನರಿಗೆ ಕಾಣಿಸಿಕೊಂಡಿದೆ.
ನಾಗರಹೊಳೆ ಆನೆಚೌಕೂರು ವಿಭಾಗದ ಅರಣ್ಯ ಇಲಾಖೆಯ ಸಿಬ್ಬಂದಿಹುಲಿಯ ಜಾಡು ಪತ್ತೆ ಹಚ್ಚಲು ಭಾನುವಾರ ಯತ್ನಿಸಿದ್ದು ಸೋಮವಾರ ಕ್ಯಾಮೆರಾ ಅಳವಡಿಸುವುದಾಗಿ ಪತ್ರಿಕೆಗೆ ತಿಳಿಸಿದ್ದಾರೆ
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.