‘ಪುರಸಭೆ ಮುಖ್ಯಾಧಿಕಾರಿಗಳಿಂದ ಹಣಕಾಸು ಲೆಕ್ಕ ಪಡೆಯಲಾಗಿದೆ. ಶೇ 16ರಷ್ಟು ಮಾತ್ರ ವಾಣಿಜ್ಯ ಮಳಿಗೆಗಳ ಬಾಡಿಗೆ ವಸೂಲಿಯಾಗಿದೆ. ಕೊರೊನಾ ಸಂಕಷ್ಟದಿಂದ ಪ್ರಸಕ್ತ ಸಾಲಿನಲ್ಲಿ ಸರ್ಕಾರದಿಂದಲೂ ಅನುದಾನ ಬಂದಿರುವುದಿಲ್ಲ. ಮುಂಬರುವ ದಿನಗಳಲ್ಲಿ ಸರ್ಕಾರದ ಅನುದಾನ, ಮನೆ, ನಿವೇಶನ, ನೀರಿನ ಕಂದಾಯ, ವಾಣಿಜ್ಯ ಮಳಿಗೆಗಳ ಬಾಡಿಗೆ ಹೀಗೆ ಎಲ್ಲವೂ ಕ್ರೋಡೀಕರಿಸಿಕೊಂಡು ಪಟ್ಟಣದ ಅಭಿವೃದ್ಧಿಗೆ ಶ್ರಮಿಸುವುದಾಗಿ’ ಹೇಳಿದರು.