ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಖಾಸಗಿ ಸಂಸ್ಥೆಯಿಂದ ಹೋಟೆಲು ಮಾಲೀಕರಿಗೆ ಮೋಸ

ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಸಿ.ನಾರಾಯಣ ಗೌಡ ಆರೋಪ
Last Updated 25 ಡಿಸೆಂಬರ್ 2018, 16:23 IST
ಅಕ್ಷರ ಗಾತ್ರ

ಮೈಸೂರು: ಖಾಸಗಿ ಪ್ರವಾಸೋದ್ಯಮ ಸಂಸ್ಥೆಯೊಂದು ಮೈಸೂರಿನ ಹೋಟೆಲ್ ಮಾಲೀಕರಿಗೆ ₹ 2 ಕೋಟಿ ವಂಚನೆ ಮಾಡಿದೆ ಎಂದು ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಸಿ.ನಾರಾಯಣ ಗೌಡ ದೂರಿದರು.

ಈ ಪ್ರವಾಸೋದ್ಯಮ ಸಂಸ್ಥೆಯು ಜಿಲ್ಲೆಯ 70 ಹೋಟೆಲು ಮಾಲೀಕರ ಜತೆ ಒಪ್ಪಂದ ಮಾಡಿಕೊಂಡಿದ್ದು, ಅದಕ್ಕೆ ತಕ್ಕಂತೆ ಹಣ ಪಾವತಿ ಮಾಡಿಲ್ಲ. ಹಾಗಾಗಿ, ಒಡಂಬಡಿಕೆಯನ್ನು ಮುರಿದುಕೊಳ್ಳುವ ನಿರ್ಧಾರಕ್ಕೆ ಮಾಲೀಕರು ಬಂದಿದ್ದಾರೆ ಎಂದು ಅವರು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ದುಬಾರಿ ಕೊಠಡಿಗಳಿಗೆ ಕಡಿಮೆ ಹಣದ ಆಸೆ ತೋರಿಸಿ ಗ್ರಾಹಕರಿಂದ ಹಣ ಪಡೆದಿದ್ದಾರೆ. ಅಲ್ಲದೇ, ಬಾಕಿ ಹಣವನ್ನು ನೀಡಿಲ್ಲ. ಮಾರುಕಟ್ಟೆ ಆಸೆಗೆ ಈ ಸಂಸ್ಥೆ ಜತೆಗೆ ಒಪ್ಪಂದ ಮಾಡಿಕೊಂಡ ಹೋಟೆಲು ಮಾಲೀಕರು ಈಗ ನಷ್ಟ ಅನುಭವಿಸುವಂತೆ ಆಗಿದೆ ಎಂದು ಅಳಲು ತೋಡಿಕೊಂಡರು.

ಸುದ್ದಿಗೋಷ್ಠಿಯಲ್ಲಿ ಹೋಟೆಲ್ ಮಾಲೀಕರ ಸಂಘದ ಪದಾಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT