ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆನೆ ತುಳಿತಕ್ಕೆ ಮಹಿಳೆ ಬಲಿ

Last Updated 27 ಮಾರ್ಚ್ 2018, 19:30 IST
ಅಕ್ಷರ ಗಾತ್ರ

ಹನೂರು (ಚಾಮರಾಜನಗರ): ಇಲ್ಲಿನ ಬೈಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಂಡೆಕುರುಬನದೊಡ್ಡಿ ಗ್ರಾಮದ ನಿವಾಸಿ ರಾಜಮ್ಮ (30) ಆನೆ ತುಳಿತದಿಂದ ಮಂಗಳವಾರ ಮೃತಪಟ್ಟಿದ್ದಾರೆ.

ರಾಜಮ್ಮ, ಇಬ್ಬರು ಮಕ್ಕಳು ಹಾಗೂ ಪತಿ ಶಿವಣ್ಣ ಅವರೊಂದಿಗೆ ತಮ್ಮ ತವರೂರಾದ ಕೋಟೆಮಾಳಕ್ಕೆ ಕಾಲುದಾರಿಯಲ್ಲಿ ನಡೆದುಕೊಂಡು ಹೋಗುತ್ತಿದ್ದರು. ಗೇರುಮಾಳ್ಯಂ ಸಮೀಪ ಎದುರಾದ ಆನೆ ದಾಳಿ ಮಾಡಿದೆ. ಪತಿಯು ಇಬ್ಬರು ಮಕ್ಕಳನ್ನು ಎತ್ತಿಕೊಂಡು ಓಡಿದ್ದಾರೆ. ಆದರೆ, ರಾಜಮ್ಮ ತಪ್ಪಿಸಿಕೊಳ್ಳುವ ವೇಳೆ ಎಡವಿ ಬಿದ್ದಿದ್ದು, ಆಗ ಆನೆಯು ತುಳಿದು ಕೊಂದಿದೆ ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ.

ಕಳೆದ ಮೂರು ವರ್ಷಗಳ ಅವಧಿಯಲ್ಲಿ ಗ್ರಾಮದಲ್ಲಿ ಇಬ್ಬರು ಆನೆ ದಾಳಿಗೆ ಮೃತಪಟ್ಟಿದ್ದಾರೆ ಎಂದು ಬೈಲೂರು ಗ್ರಾಮ ಪಂಚಾಯಿತಿ ಸದಸ್ಯ ಸಣ್ಣಮ್ಮ ‘ಪ್ರಜಾವಾಣಿ’ಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT