<p><strong>ಮೈಸೂರು</strong>: ಕೆ.ಆರ್.ಆಸ್ಪತ್ರೆಯಲ್ಲಿ ನಡೆಯುತ್ತಿರುವ ಟ್ರೈನಿ ಸ್ಟಾಫ್ ನರ್ಸ್ಗಳ ಪ್ರತಿಭಟನೆ ಬುಧವಾರವೂ ಮುಂದುವರಿದಿದೆ. ಆಸ್ಪತ್ರೆಯ ಆವರಣದಲ್ಲಿ ಸಾಂಕೇತಿಕವಾಗಿ ಪ್ರತಿಭಟನೆ ಮಾಡಿದ ಸುಮಾರು 150 ಮಂದಿ ನಂತರ ಕಪ್ಪುಪಟ್ಟಿ ಧರಿಸಿಕೊಂಡು ತಮ್ಮ ತಮ್ಮ ಕರ್ತವ್ಯಕ್ಕೆ ಹಾಜರಾದರು.</p>.<p>‘ಕಳೆದ ಮೂರು ದಿನಗಳಿಂದ ಮಾಡುತ್ತಿರುವ ಸಾಂಕೇತಿಕ ಪ್ರತಿಭಟನೆಗಳನ್ನು ನಿಲ್ಲಿಸಬೇಕು, ಈ ರೀತಿ ಒತ್ತಡ ಹೇರಬಾರದು ಎಂದು ಕೆಲವು ಹಿರಿಯ ಶುಶ್ರೂಷಕರು ಹಾಗೂ ಅಧಿಕಾರಿಗಳು ಒತ್ತಡ ಹೇರುತ್ತಿದ್ದಾರೆ’ ಎಂದು ಹೆಸರು ಬಹಿರಂಗಪಡಿಸಲು ಇಚ್ಚಿಸದ ಟ್ರೈನಿ ಸ್ಟಾಫ್ ನರ್ಸ್ವೊಬ್ಬರು ತಿಳಿಸಿದರು.</p>.<p>‘ಕಳೆದ ಹಲವು ವರ್ಷಗಳಿಂದ ಶಿಷ್ಯವೇತನದ ಆಧಾರದ ಮೇಲೆ ಕೆಲಸ ಮಾಡುತ್ತಿರುವ ನಮ್ಮನ್ನು ಕಾಯಂ ಆಗಿ ಅಥವಾ ಕನಿಷ್ಠ ಗುತ್ತಿಗೆ ನೌಕರರನ್ನಾಗಿ ಪರಿಗಣಿಸಬೇಕು ಎಂದು ಕೇಳುತ್ತಿದ್ದೇವೆ. ಇದೇನು ರಾಜ್ಯದಲ್ಲಿ ಹೊಸತಲ್ಲ. ಈಗಾಗಲೇ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಈ ಕ್ರಮವನ್ನು ಜಾರಿಗೊಳಿಸಲಾಗಿದೆ. ಈ ಕುರಿತು ಸರ್ಕಾರದ ಆದೇಶವೂ ಇದೆ. ಇದನ್ನು ಪಾಲನೆ ಮಾಡಿ ಎಂದು ಕೇಳುವುದು ತಪ್ಪೇ’ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.</p>.<p>‘ಕೋವಿಡ್ ಶಂಕಿತ ರೋಗಿಗಳ ಆರೈಕೆಗೆ ನಮ್ಮನ್ನು ನಿಯೋಜಿಸಲಾಗುತ್ತಿದೆ. ತಿಂಗಳಿಗೆ ಕೇವಲ ₹ 10 ಸಾವಿರವಷ್ಟೇ ಸಂಬಳ ನೀಡಲಾಗುತ್ತಿದೆ. ಇತರೆ ಶುಶ್ರೂಷಕರಿಗೆ ಇರುವಂತಹ ಕ್ವಾರಂಟೈನ್, ವಿಮೆ ಮೊದಲಾದ ಸೌಲಭ್ಯಗಳನ್ನು ನಿರಾಕರಿಸಲಾಗುತ್ತಿದೆ. ಇದು ಸರಿಯೇ’ ಎಂದು ಪ್ರಶ್ನಿಸಿದರು.</p>.<p>‘ಕೋವಿಡ್ ಸಂಕಷ್ಟದಲ್ಲಿ ನಾವು ಕರ್ತವ್ಯವನ್ನು ನಿರ್ವಹಿಸುವುದಿಲ್ಲ ಎಂದು ಹೇಳುತ್ತಿಲ್ಲ. ನಾವು ಯಾವುದೇ ಕರ್ತವ್ಯ ಕೊಟ್ಟರೂ ನಿಭಾಯಿಸಲು ಸಿದ್ಧ. ಆದರೆ, ನಮ್ಮನ್ನು ಕಾಯಂಗೊಳಿಸಬೇಕು, ಇಲ್ಲವೇ ಗುತ್ತಿಗೆ ಆಧಾರದ ಸಿಬ್ಬಂದಿಯನ್ನಾಗಿ ಪರಿಗಣಿಸಬೇಕು’ ಎಂದು ಒತ್ತಾಯಿಸಿದರು.</p>.<p>‘ಜುಲೈ 10ರಂದು ಈ ಕುರಿತು ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸುವ ಭರವಸೆ ನೀಡಲಾಗಿದೆ. ಅಲ್ಲಿಯವರೆಗೆ ನಾವು ಕಪ್ಪುಪಟ್ಟಿ ಧರಿಸಿ ಕರ್ತವ್ಯ ನಿರ್ವಹಿಸುತ್ತೇವೆ. ನಂತರ, ಮುಖ್ಯಮಂತ್ರಿ, ವೈದ್ಯಕೀಯ ಸಚಿವರಿಗೆ ಏಕಕಾಲಕ್ಕೆ ಟ್ವಿಟ್ ಮಾಡುವ ಮೂಲಕ ಅವರ ಗಮನ ಸೆಳೆಯುತ್ತೇವೆ’ ಎಂದು ಹೇಳಿದರು.</p>.<p><strong>ಲಾಕ್ಡೌನ್ ಅವಧಿಯ ವೇತನ ನೀಡಲು ಆಗ್ರಹ</strong></p>.<p>ಕರ್ನಾಟಕ ರಾಜ್ಯ ಸಂಯುಕ್ತ ವಸತಿ ನಿಲಯ ಕಾರ್ಮಿಕರ ಸಂಘದ ನೇತೃತ್ವದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಹಾಸ್ಟೆಲ್, ವಸತಿ ಶಾಲೆಗಳ ಹೊರಗುತ್ತಿಗೆ ಕಾರ್ಮಿಕರು ಲಾಕ್ಡೌನ್ ಅವಧಿಗೆ ವೇತನ ಮತ್ತು ಜೂನ್ ತಿಂಗಳಿನಿಂದ ಕೆಲಸ ನೀಡುವಂತೆ ಆಗ್ರಹಿಸಿ ಬುಧವಾರ ಪ್ರತಿಭಟನೆ ನಡೆಸಿದರು.</p>.<p>ಇಲ್ಲಿನ ಸಮಾಜ ಕಲ್ಯಾಣ ಇಲಾಖೆಯ ಕಚೇರಿ ಮುಂದೆ ಸೇರಿದ ಪ್ರತಿಭಟನಕಾರರು ಘೋಷಣೆಗಳನ್ನು ಕೂಗಿದರು.</p>.<p>ಕಳೆದ 18 ವರ್ಷಗಳಿಂದ ಹೊರಗುತ್ತಿಗೆ ಆಧಾರದ ಮೇಲೆ ಕಾರ್ಮಿಕರು ಕಾರ್ಯನಿರ್ವಹಿಸುತ್ತಿದ್ದು, ಇವರಿಗೆ ಲಾಕ್ಡೌನ್ ಅವಧಿಯ ಸಂಬಳ ನೀಡಿಲ್ಲ. ಇವರ ಬದುಕು ಶೋಚನೀಯವಾಗಿದೆ ಎಂದು ಆಳಲು ತೋಡಿಕೊಂಡರು.</p>.<p>ಕಾರ್ಮಿಕರಿಗೆ ಇಪಿಎಫ್ ಪಾವತಿ ಕುರಿತು ಮಾಹಿತಿ ನೀಡಬೇಕು, 4 ವರ್ಷಗಳಿಂದ ಬಾಕಿ ಉಳಿಸಿಕೊಂಡಿರುವ ಹಿಂಬಾಕಿ ವೇತನವನ್ನು ತಕ್ಷಣವೇ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.</p>.<p>ಸಂಘಟನೆಯ ಕಾರ್ಯದರ್ಶಿ ಎನ್.ಮುದ್ದುಕೃಷ್ಣ, ಮುಖಂಡರಾದ ಚಂದ್ರಶೇಖರ್ ಮೇಟಿ, ರವಿ, ಲೋಕೇಶ್, ಮಹದೇವಮ್ಮ ಹಾಗೂ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ಕೆ.ಆರ್.ಆಸ್ಪತ್ರೆಯಲ್ಲಿ ನಡೆಯುತ್ತಿರುವ ಟ್ರೈನಿ ಸ್ಟಾಫ್ ನರ್ಸ್ಗಳ ಪ್ರತಿಭಟನೆ ಬುಧವಾರವೂ ಮುಂದುವರಿದಿದೆ. ಆಸ್ಪತ್ರೆಯ ಆವರಣದಲ್ಲಿ ಸಾಂಕೇತಿಕವಾಗಿ ಪ್ರತಿಭಟನೆ ಮಾಡಿದ ಸುಮಾರು 150 ಮಂದಿ ನಂತರ ಕಪ್ಪುಪಟ್ಟಿ ಧರಿಸಿಕೊಂಡು ತಮ್ಮ ತಮ್ಮ ಕರ್ತವ್ಯಕ್ಕೆ ಹಾಜರಾದರು.</p>.<p>‘ಕಳೆದ ಮೂರು ದಿನಗಳಿಂದ ಮಾಡುತ್ತಿರುವ ಸಾಂಕೇತಿಕ ಪ್ರತಿಭಟನೆಗಳನ್ನು ನಿಲ್ಲಿಸಬೇಕು, ಈ ರೀತಿ ಒತ್ತಡ ಹೇರಬಾರದು ಎಂದು ಕೆಲವು ಹಿರಿಯ ಶುಶ್ರೂಷಕರು ಹಾಗೂ ಅಧಿಕಾರಿಗಳು ಒತ್ತಡ ಹೇರುತ್ತಿದ್ದಾರೆ’ ಎಂದು ಹೆಸರು ಬಹಿರಂಗಪಡಿಸಲು ಇಚ್ಚಿಸದ ಟ್ರೈನಿ ಸ್ಟಾಫ್ ನರ್ಸ್ವೊಬ್ಬರು ತಿಳಿಸಿದರು.</p>.<p>‘ಕಳೆದ ಹಲವು ವರ್ಷಗಳಿಂದ ಶಿಷ್ಯವೇತನದ ಆಧಾರದ ಮೇಲೆ ಕೆಲಸ ಮಾಡುತ್ತಿರುವ ನಮ್ಮನ್ನು ಕಾಯಂ ಆಗಿ ಅಥವಾ ಕನಿಷ್ಠ ಗುತ್ತಿಗೆ ನೌಕರರನ್ನಾಗಿ ಪರಿಗಣಿಸಬೇಕು ಎಂದು ಕೇಳುತ್ತಿದ್ದೇವೆ. ಇದೇನು ರಾಜ್ಯದಲ್ಲಿ ಹೊಸತಲ್ಲ. ಈಗಾಗಲೇ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಈ ಕ್ರಮವನ್ನು ಜಾರಿಗೊಳಿಸಲಾಗಿದೆ. ಈ ಕುರಿತು ಸರ್ಕಾರದ ಆದೇಶವೂ ಇದೆ. ಇದನ್ನು ಪಾಲನೆ ಮಾಡಿ ಎಂದು ಕೇಳುವುದು ತಪ್ಪೇ’ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.</p>.<p>‘ಕೋವಿಡ್ ಶಂಕಿತ ರೋಗಿಗಳ ಆರೈಕೆಗೆ ನಮ್ಮನ್ನು ನಿಯೋಜಿಸಲಾಗುತ್ತಿದೆ. ತಿಂಗಳಿಗೆ ಕೇವಲ ₹ 10 ಸಾವಿರವಷ್ಟೇ ಸಂಬಳ ನೀಡಲಾಗುತ್ತಿದೆ. ಇತರೆ ಶುಶ್ರೂಷಕರಿಗೆ ಇರುವಂತಹ ಕ್ವಾರಂಟೈನ್, ವಿಮೆ ಮೊದಲಾದ ಸೌಲಭ್ಯಗಳನ್ನು ನಿರಾಕರಿಸಲಾಗುತ್ತಿದೆ. ಇದು ಸರಿಯೇ’ ಎಂದು ಪ್ರಶ್ನಿಸಿದರು.</p>.<p>‘ಕೋವಿಡ್ ಸಂಕಷ್ಟದಲ್ಲಿ ನಾವು ಕರ್ತವ್ಯವನ್ನು ನಿರ್ವಹಿಸುವುದಿಲ್ಲ ಎಂದು ಹೇಳುತ್ತಿಲ್ಲ. ನಾವು ಯಾವುದೇ ಕರ್ತವ್ಯ ಕೊಟ್ಟರೂ ನಿಭಾಯಿಸಲು ಸಿದ್ಧ. ಆದರೆ, ನಮ್ಮನ್ನು ಕಾಯಂಗೊಳಿಸಬೇಕು, ಇಲ್ಲವೇ ಗುತ್ತಿಗೆ ಆಧಾರದ ಸಿಬ್ಬಂದಿಯನ್ನಾಗಿ ಪರಿಗಣಿಸಬೇಕು’ ಎಂದು ಒತ್ತಾಯಿಸಿದರು.</p>.<p>‘ಜುಲೈ 10ರಂದು ಈ ಕುರಿತು ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸುವ ಭರವಸೆ ನೀಡಲಾಗಿದೆ. ಅಲ್ಲಿಯವರೆಗೆ ನಾವು ಕಪ್ಪುಪಟ್ಟಿ ಧರಿಸಿ ಕರ್ತವ್ಯ ನಿರ್ವಹಿಸುತ್ತೇವೆ. ನಂತರ, ಮುಖ್ಯಮಂತ್ರಿ, ವೈದ್ಯಕೀಯ ಸಚಿವರಿಗೆ ಏಕಕಾಲಕ್ಕೆ ಟ್ವಿಟ್ ಮಾಡುವ ಮೂಲಕ ಅವರ ಗಮನ ಸೆಳೆಯುತ್ತೇವೆ’ ಎಂದು ಹೇಳಿದರು.</p>.<p><strong>ಲಾಕ್ಡೌನ್ ಅವಧಿಯ ವೇತನ ನೀಡಲು ಆಗ್ರಹ</strong></p>.<p>ಕರ್ನಾಟಕ ರಾಜ್ಯ ಸಂಯುಕ್ತ ವಸತಿ ನಿಲಯ ಕಾರ್ಮಿಕರ ಸಂಘದ ನೇತೃತ್ವದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಹಾಸ್ಟೆಲ್, ವಸತಿ ಶಾಲೆಗಳ ಹೊರಗುತ್ತಿಗೆ ಕಾರ್ಮಿಕರು ಲಾಕ್ಡೌನ್ ಅವಧಿಗೆ ವೇತನ ಮತ್ತು ಜೂನ್ ತಿಂಗಳಿನಿಂದ ಕೆಲಸ ನೀಡುವಂತೆ ಆಗ್ರಹಿಸಿ ಬುಧವಾರ ಪ್ರತಿಭಟನೆ ನಡೆಸಿದರು.</p>.<p>ಇಲ್ಲಿನ ಸಮಾಜ ಕಲ್ಯಾಣ ಇಲಾಖೆಯ ಕಚೇರಿ ಮುಂದೆ ಸೇರಿದ ಪ್ರತಿಭಟನಕಾರರು ಘೋಷಣೆಗಳನ್ನು ಕೂಗಿದರು.</p>.<p>ಕಳೆದ 18 ವರ್ಷಗಳಿಂದ ಹೊರಗುತ್ತಿಗೆ ಆಧಾರದ ಮೇಲೆ ಕಾರ್ಮಿಕರು ಕಾರ್ಯನಿರ್ವಹಿಸುತ್ತಿದ್ದು, ಇವರಿಗೆ ಲಾಕ್ಡೌನ್ ಅವಧಿಯ ಸಂಬಳ ನೀಡಿಲ್ಲ. ಇವರ ಬದುಕು ಶೋಚನೀಯವಾಗಿದೆ ಎಂದು ಆಳಲು ತೋಡಿಕೊಂಡರು.</p>.<p>ಕಾರ್ಮಿಕರಿಗೆ ಇಪಿಎಫ್ ಪಾವತಿ ಕುರಿತು ಮಾಹಿತಿ ನೀಡಬೇಕು, 4 ವರ್ಷಗಳಿಂದ ಬಾಕಿ ಉಳಿಸಿಕೊಂಡಿರುವ ಹಿಂಬಾಕಿ ವೇತನವನ್ನು ತಕ್ಷಣವೇ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.</p>.<p>ಸಂಘಟನೆಯ ಕಾರ್ಯದರ್ಶಿ ಎನ್.ಮುದ್ದುಕೃಷ್ಣ, ಮುಖಂಡರಾದ ಚಂದ್ರಶೇಖರ್ ಮೇಟಿ, ರವಿ, ಲೋಕೇಶ್, ಮಹದೇವಮ್ಮ ಹಾಗೂ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>