ಅಧ್ಯಕ್ಷತೆ ವಹಿಸಿದ್ದ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎಸ್.ವಿದ್ಯಾಶಂಕರ್, ‘ಸ್ಪರ್ಧಾತ್ಮಕ ಪರೀಕ್ಷೆ ಬರೆಯುವವರಿಗೆ ಮಾರ್ಗದರ್ಶನ ಹಾಗೂ ಎಲ್ಲ ರೀತಿಯ ಸೌಲಭ್ಯಗಳನ್ನು ಒದಗಿಸಲು ಸಿದ್ಧವಿದ್ದೇವೆ. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಅವಕಾಶಗಳು ಬಹಳ ಇದ್ದರೂ ಪ್ರತಿಸ್ಪರ್ಧಿಗಳು ಹೆಚ್ಚಿರುತ್ತಾರೆ. ಹೀಗಾಗಿ, ಹೆಚ್ಚಿನ ಅಧ್ಯಯನ ಮತ್ತು ವಿಷಯಗಳ ಬಗ್ಗೆ ಆಳವಾದ ಜ್ಞಾನ ಹೊಂದಿರುವುದು ಅವಶ್ಯವಾಗಿದೆ’ ಎಂದು ತಿಳಿಸಿದರು.