ಈ ಕುರಿತು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಪಾಲಿಕೆಯ ತೋಟಗಾರಿಕಾ ವಿಭಾಗದ ಸಹಾಯಕ ನಿರ್ದೇಶಕ ಮಣಿಕಂಠ , ‘ಇದೊಂದು ದೊಡ್ಡ ಗಾತ್ರದ ಛತ್ರಿಮರ. ಮೈಸೂರು ವಿ.ವಿ ವ್ಯಾಪ್ತಿಗೆ ಸೇರಿದ ಕೆರೆ ಆವರಣದಿಂದ ರಸ್ತೆಯ ಕಡೆ ಚಾಚಿಕೊಂಡಿದ್ದ ಬೃಹತ್ ಗಾತ್ರದ ಕೊಂಬೆ ಮುರಿದಿದೆ. ಇದು ಮುರಿದು ಬೀಳುವ ಕ್ಷಣದಲ್ಲಿ ರಸ್ತೆಯಲ್ಲಿ ಯಾರೂ ಇಲ್ಲದ್ದರಿಂದ ಅಪಾಯ ತಪ್ಪಿದೆ ಎಂದು ಹೇಳಿದರು.