ಮೈಸೂರು: ಇಲ್ಲಿನ ವಿದ್ಯಾರಣ್ಯಾಪುರಂನ 4ನೇ ಮುಖ್ಯರಸ್ತೆಯ 3ನೇ ಅಡ್ಡರಸ್ತೆಯಲ್ಲಿ ಮಂಗಳವಾರ ಸಂಜೆ ಬೃಹತ್ ಮರ ಉರುಳಿ ಬಿದ್ದಿದೆ. ಮನೆಯೊಂದರ ಕಾಂಪೌಂಡ್ ಇದರಿಂದ ಜಖಂಗೊಂಡಿದೆ.
ಇದರ ಬೇರು ಶಿಥಿಲಾವಸ್ಥೆ ತಲುಪಿದ್ದರಿಂದ ಮರವು ಬಿದ್ದಿದೆ ಎಂದು ಪಾಲಿಕೆ ಸದಸ್ಯ ಮ.ವಿ.ರಾಮಪ್ರಸಾದ್ ತಿಳಿಸಿದ್ದಾರೆ.
ಪಾಲಿಕೆ, ಸೆಸ್ಕ್ ಹಾಗೂ ಅರಣ್ಯ ಇಲಾಖೆ ಜಂಟಿಯಾಗಿ ನಗರದಲ್ಲಿ ಅಪಾಯದಲ್ಲಿರುವ ಮರಗಳ ಸಮೀಕ್ಷೆ ಕಾರ್ಯ ನಡೆಸಬೇಕು. ಉರುಳುವ ಹಂತದ ಮರಗಳನ್ನು ಕೂಡಲೇ ತೆರವುಗೊಳಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಸ್ಥಳಕ್ಕೆ ಬಂದ ಅಭಯ್ ರಕ್ಷಣಾ ತಂಡವು ಮರವನ್ನು ತೆರವುಗೊಳಿಸಿತು.