ಮೈಸೂರು: ವೈವಿಧ್ಯಮಯ ಕಾರ್ಯಕ್ರಮಗಳ ಮೂಲಕ ರಂಗಪ್ರೇಮಿಗಳಿಗೆ ರಸದೌತಣ ಉಣಬಡಿಸಲಿರುವ ಬಹುರೂಪಿ ರಾಷ್ಟ್ರೀಯ ರಂಗೋತ್ಸವಕ್ಕೆ ಶನಿವಾರ ಸಂಜೆ ಇಲ್ಲಿ ‘ವೃಕ್ಷಮಾತೆ’ ತುಳಸೀಗೌಡ ಚಾಲನೆ ನೀಡಿದರು.
ಒಂಬತ್ತು ದಿನಗಳ ಉತ್ಸವ ನಡೆಯಲಿದ್ದು, ಮೈಸೂರು ರಂಗಾಯಣದಲ್ಲಿ ಕಲಾ ಸಾಮ್ರಾಜ್ಯವೇ ನಿರ್ಮಾಣವಾಗಿದೆ. ನಿತ್ಯ ನಾಟಕ, ಚಲನಚಿತ್ರೋತ್ಸವ, ಸಂಗೀತ ಮೇಲೈಸಲಿವೆ. ವಿವಿಧ ಭಾಷೆಗಳ ನಾಟಕಗಳು, ರಾಜ್ಯ ಹಾಗೂ ಹೊರರಾಜ್ಯದ ಜಾನಪದ ಕಲೆಗಳ ಪ್ರದರ್ಶನ ನಡೆಯಲಿದೆ.