<p>ಮೈಸೂರು: ಎಟಿಎಂ ಒಡೆದು ಹಣ ಕಳ್ಳತನ ಮಾಡಿದ್ದ ಅಂತರರಾಜ್ಯ ಕಳ್ಳರನ್ನು ಬಂಧಿಸಿರುವ ವಿಜಯನಗರ ಪೊಲೀಸರು ₹ 2.50 ಲಕ್ಷ ವಶಪಡಿಸಿಕೊಂಡಿದ್ದಾರೆ.</p>.<p>ಹರಿಯಾಣದ ಅನೀಸ್ (30) ಹಾಗೂ ಬರ್ಖತ್ (22) ಬಂಧಿತ ಆರೋಪಿಗಳು.</p>.<p>ರಾಣೆ ಮದ್ರಾಸ್ ಫ್ಯಾಕ್ಟರಿ ಮುಂಭಾಗದಲ್ಲಿರುವ ಎಚ್ಡಿಎಫ್ಸಿ ಬ್ಯಾಂಕಿಗೆ ಸೇರಿದ ಎಟಿಎಂ ಮಳಿಗೆಯ ಶೆಟರ್ ಒಡೆದು ಎಟಿಎಂ ಯಂತ್ರವನ್ನು ಗ್ಯಾಸ್ ಕಟ್ಟರ್ನಿಂದ ಕತ್ತರಿಸಿದ್ದರು. ಸೆ.17ರಂದು ರಾತ್ರಿ ನಡೆದಿದ್ದ ಈ ಘಟನೆಯಲ್ಲಿ ₹ 12.81 ಲಕ್ಷ ಕಳವು ಮಾಡಿ ಪರಾರಿಯಾಗಿದ್ದರು.</p>.<p>ವಿಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಗಳ ಪತ್ತೆಗಾಗಿ ನಗರದ ಪೊಲೀಸ್ ಕಮೀಷನರ್ ಡಾ.ಚಂದ್ರಗುಪ್ತ, ಡಿಸಿಪಿ ಗೀತಾ ಪ್ರಸನ್ನ ಮಾರ್ಗದರ್ಶನದಲ್ಲಿ ವಿಶೇಷ ತಂಡ ರಚಿಸಲಾಗಿತ್ತು. ಈ ತಂಡವು ತಾಂತ್ರಿಕ ಕೌಶಲ ಬಳಸಿ ಆರೋಪಿಗಳು ಹರಿಯಾಣದಲ್ಲಿರುವ ಬಗ್ಗೆ ಮಾಹಿತಿ ಸಂಗ್ರಹಿಸಿತು. ಅಲ್ಲಿಗೆ ತೆರಳಿ ಕಾರ್ಯಾಚರಣೆ ನಡೆಸಿ ಈ ಇಬ್ಬರನ್ನು ಬಂಧಿಸಿ, ರಾಜ್ಯಕ್ಕೆ ಕರೆತರುವಲ್ಲಿ ಯಶಸ್ವಿಯಾಗಿದೆ.</p>.<p>‘ಆರೋಪಿಗಳು ಕಳವು ಮಾಡಿದ್ದರಲ್ಲಿ ₹ 1 ಲಕ್ಷವನ್ನು ತಮ್ಮ ಬ್ಯಾಂಕ್ ಖಾತೆಗೆ ಜಮಾ ಮಾಡಿಕೊಂಡಿದ್ದರು. ಈ ಹಣವನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳ ಬಳಿ ಇದ್ದ ₹ 1.5 ಲಕ್ಷ ಮತ್ತು ಕೃತ್ಯಕ್ಕೆ ಬಳಸಿದ ಉಪಕರಣಗಳನ್ನು ವಶಕ್ಕೆ ಪಡೆಯಲಾಗಿದೆ. ಉಳಿದ ಬಹುಪಾಲು ಹಣ ತಲೆಮರೆಸಿಕೊಂಡಿರುವ ಆರೋಪಿಗಳ ಬಳಿಯೇ ಇರುವ ಬಗ್ಗೆ ವಿಚಾರಣೆಯಿಂದ ತಿಳಿದುಬಂದಿದ್ದು, ಪತ್ತೆ ಕಾರ್ಯ ಮುಂದುವರಿದಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಈ ವಿಶೇಷ ಕಾರ್ಯಾಚರಣೆಯನ್ನು ಡಿಸಿಪಿಗಳಾದ ಡಾ.ಎ.ಎನ್.ಪ್ರಕಾಶ್ ಗೌಡ, ಗೀತಾ ಪ್ರಸನ್ನ ಹಾಗೂ ಎಸಿಪಿ ಗಳಾದ ಮರಿಯಪ್ಪ ಮತ್ತು ಶಿವಶಂಕರ್ ಮಾರ್ಗದರ್ಶನದಲ್ಲಿ ವಿಜಯನಗರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಬಾಲಕೃಷ್ಣ ಹಾಗೂ ಮೇಟಗಳ್ಳಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಮಲ್ಲೇಶ್ ಹಾಗೂ ಇತರ ಸಿಬ್ಬಂದಿ ನಡೆಸಿರುತ್ತಾರೆ.</p>.<p class="Briefhead">ಕಾಣೆಯಾಗಿದ್ದ ಬಾಲಕನ ಶವ ಪತ್ತೆ</p>.<p>ಕೆ.ಆರ್.ನಗರ: 4 ದಿನದ ಹಿಂದೆ ಕಾಣೆಯಾಗಿದ್ದ ಬಾಲಕ ಶವ ತಾಲ್ಲೂಕಿನ ಲಾಳನಹಳ್ಳಿ ಗ್ರಾಮದ ಬಳಿಯ ನಾಲೆಯಲ್ಲಿ ಶನಿವಾರ ಪತ್ತೆಯಾಗಿದೆ.</p>.<p>ಇಲ್ಲಿನ ಮೀನಾಕ್ಷಿ ಪುರಂ ನಿವಾಸಿ ವಿಜಯ್ ಮತ್ತು ವನಲಕ್ಷ್ಮೀ ದಂಪತಿ ಪುತ್ರ ಲಿಖಿತ್ (8) ಮೃತ ಬಾಲಕ. ಅ. 7ರಂದು ಶಾಲೆಯಿಂದ ಮನೆಗೆ ಬಂದ ಬಾಲಕ ಕೆಲ ಸಮಯದ ಬಳಿಕ ಕಾಣೆಯಾಗಿದ್ದನು. ಪ್ರಕರಣ ದಾಖಲಿಸಿ ಕೊಂಡಿರುವ ಸ್ಥಳೀಯ ಪೊಲೀಸರು ತನಿಖೆ ನಡೆಸಿದ್ದಾರೆ.</p>.<p>ಯುವ ವಿಜ್ಞಾನಿ ನಾಪತ್ತೆ</p>.<p>ಮೈಸೂರು: ಮೈಸೂರಿನಲ್ಲಿರುವ ಕೇಂದ್ರ ಸರ್ಕಾರದ ಸಂಸ್ಥೆಯೊಂದರಲ್ಲಿ ಕಾರ್ಯನಿರ್ವಹಿಸುತ್ತಿದ್ದ ಆಂಧ್ರಪ್ರದೇಶದ ಯುವ ವಿಜ್ಞಾನಿಯೊಬ್ಬರು ನಾಪತ್ತೆ ಆಗಿದ್ದಾರೆ.</p>.<p>‘ಇಲವಾಲದ ನ್ಯೂ ಜನತಾ ಕಾಲೊನಿಯಲ್ಲಿ ವಾಸವಿದ್ದ ಅಭಿಷೇಕ್ ರೆಡ್ಡಿ ಎಂಬ ವ್ಯಕ್ತಿ ನಾಲ್ಕು ದಿನಗಳಿಂದ ಕಾಣೆಯಾಗಿರುವ ವಿಚಾರ ಗೊತ್ತಾಗಿದೆ. ಕೆಲಸಕ್ಕೂಹಾಜರಾಗಿಲ್ಲ.ಇಲವಾಲ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪತ್ತೆಗಾಗಿ ಹುಡುಕಾಟ ನಡೆಯುತ್ತಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮೈಸೂರು: ಎಟಿಎಂ ಒಡೆದು ಹಣ ಕಳ್ಳತನ ಮಾಡಿದ್ದ ಅಂತರರಾಜ್ಯ ಕಳ್ಳರನ್ನು ಬಂಧಿಸಿರುವ ವಿಜಯನಗರ ಪೊಲೀಸರು ₹ 2.50 ಲಕ್ಷ ವಶಪಡಿಸಿಕೊಂಡಿದ್ದಾರೆ.</p>.<p>ಹರಿಯಾಣದ ಅನೀಸ್ (30) ಹಾಗೂ ಬರ್ಖತ್ (22) ಬಂಧಿತ ಆರೋಪಿಗಳು.</p>.<p>ರಾಣೆ ಮದ್ರಾಸ್ ಫ್ಯಾಕ್ಟರಿ ಮುಂಭಾಗದಲ್ಲಿರುವ ಎಚ್ಡಿಎಫ್ಸಿ ಬ್ಯಾಂಕಿಗೆ ಸೇರಿದ ಎಟಿಎಂ ಮಳಿಗೆಯ ಶೆಟರ್ ಒಡೆದು ಎಟಿಎಂ ಯಂತ್ರವನ್ನು ಗ್ಯಾಸ್ ಕಟ್ಟರ್ನಿಂದ ಕತ್ತರಿಸಿದ್ದರು. ಸೆ.17ರಂದು ರಾತ್ರಿ ನಡೆದಿದ್ದ ಈ ಘಟನೆಯಲ್ಲಿ ₹ 12.81 ಲಕ್ಷ ಕಳವು ಮಾಡಿ ಪರಾರಿಯಾಗಿದ್ದರು.</p>.<p>ವಿಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಗಳ ಪತ್ತೆಗಾಗಿ ನಗರದ ಪೊಲೀಸ್ ಕಮೀಷನರ್ ಡಾ.ಚಂದ್ರಗುಪ್ತ, ಡಿಸಿಪಿ ಗೀತಾ ಪ್ರಸನ್ನ ಮಾರ್ಗದರ್ಶನದಲ್ಲಿ ವಿಶೇಷ ತಂಡ ರಚಿಸಲಾಗಿತ್ತು. ಈ ತಂಡವು ತಾಂತ್ರಿಕ ಕೌಶಲ ಬಳಸಿ ಆರೋಪಿಗಳು ಹರಿಯಾಣದಲ್ಲಿರುವ ಬಗ್ಗೆ ಮಾಹಿತಿ ಸಂಗ್ರಹಿಸಿತು. ಅಲ್ಲಿಗೆ ತೆರಳಿ ಕಾರ್ಯಾಚರಣೆ ನಡೆಸಿ ಈ ಇಬ್ಬರನ್ನು ಬಂಧಿಸಿ, ರಾಜ್ಯಕ್ಕೆ ಕರೆತರುವಲ್ಲಿ ಯಶಸ್ವಿಯಾಗಿದೆ.</p>.<p>‘ಆರೋಪಿಗಳು ಕಳವು ಮಾಡಿದ್ದರಲ್ಲಿ ₹ 1 ಲಕ್ಷವನ್ನು ತಮ್ಮ ಬ್ಯಾಂಕ್ ಖಾತೆಗೆ ಜಮಾ ಮಾಡಿಕೊಂಡಿದ್ದರು. ಈ ಹಣವನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳ ಬಳಿ ಇದ್ದ ₹ 1.5 ಲಕ್ಷ ಮತ್ತು ಕೃತ್ಯಕ್ಕೆ ಬಳಸಿದ ಉಪಕರಣಗಳನ್ನು ವಶಕ್ಕೆ ಪಡೆಯಲಾಗಿದೆ. ಉಳಿದ ಬಹುಪಾಲು ಹಣ ತಲೆಮರೆಸಿಕೊಂಡಿರುವ ಆರೋಪಿಗಳ ಬಳಿಯೇ ಇರುವ ಬಗ್ಗೆ ವಿಚಾರಣೆಯಿಂದ ತಿಳಿದುಬಂದಿದ್ದು, ಪತ್ತೆ ಕಾರ್ಯ ಮುಂದುವರಿದಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಈ ವಿಶೇಷ ಕಾರ್ಯಾಚರಣೆಯನ್ನು ಡಿಸಿಪಿಗಳಾದ ಡಾ.ಎ.ಎನ್.ಪ್ರಕಾಶ್ ಗೌಡ, ಗೀತಾ ಪ್ರಸನ್ನ ಹಾಗೂ ಎಸಿಪಿ ಗಳಾದ ಮರಿಯಪ್ಪ ಮತ್ತು ಶಿವಶಂಕರ್ ಮಾರ್ಗದರ್ಶನದಲ್ಲಿ ವಿಜಯನಗರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಬಾಲಕೃಷ್ಣ ಹಾಗೂ ಮೇಟಗಳ್ಳಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಮಲ್ಲೇಶ್ ಹಾಗೂ ಇತರ ಸಿಬ್ಬಂದಿ ನಡೆಸಿರುತ್ತಾರೆ.</p>.<p class="Briefhead">ಕಾಣೆಯಾಗಿದ್ದ ಬಾಲಕನ ಶವ ಪತ್ತೆ</p>.<p>ಕೆ.ಆರ್.ನಗರ: 4 ದಿನದ ಹಿಂದೆ ಕಾಣೆಯಾಗಿದ್ದ ಬಾಲಕ ಶವ ತಾಲ್ಲೂಕಿನ ಲಾಳನಹಳ್ಳಿ ಗ್ರಾಮದ ಬಳಿಯ ನಾಲೆಯಲ್ಲಿ ಶನಿವಾರ ಪತ್ತೆಯಾಗಿದೆ.</p>.<p>ಇಲ್ಲಿನ ಮೀನಾಕ್ಷಿ ಪುರಂ ನಿವಾಸಿ ವಿಜಯ್ ಮತ್ತು ವನಲಕ್ಷ್ಮೀ ದಂಪತಿ ಪುತ್ರ ಲಿಖಿತ್ (8) ಮೃತ ಬಾಲಕ. ಅ. 7ರಂದು ಶಾಲೆಯಿಂದ ಮನೆಗೆ ಬಂದ ಬಾಲಕ ಕೆಲ ಸಮಯದ ಬಳಿಕ ಕಾಣೆಯಾಗಿದ್ದನು. ಪ್ರಕರಣ ದಾಖಲಿಸಿ ಕೊಂಡಿರುವ ಸ್ಥಳೀಯ ಪೊಲೀಸರು ತನಿಖೆ ನಡೆಸಿದ್ದಾರೆ.</p>.<p>ಯುವ ವಿಜ್ಞಾನಿ ನಾಪತ್ತೆ</p>.<p>ಮೈಸೂರು: ಮೈಸೂರಿನಲ್ಲಿರುವ ಕೇಂದ್ರ ಸರ್ಕಾರದ ಸಂಸ್ಥೆಯೊಂದರಲ್ಲಿ ಕಾರ್ಯನಿರ್ವಹಿಸುತ್ತಿದ್ದ ಆಂಧ್ರಪ್ರದೇಶದ ಯುವ ವಿಜ್ಞಾನಿಯೊಬ್ಬರು ನಾಪತ್ತೆ ಆಗಿದ್ದಾರೆ.</p>.<p>‘ಇಲವಾಲದ ನ್ಯೂ ಜನತಾ ಕಾಲೊನಿಯಲ್ಲಿ ವಾಸವಿದ್ದ ಅಭಿಷೇಕ್ ರೆಡ್ಡಿ ಎಂಬ ವ್ಯಕ್ತಿ ನಾಲ್ಕು ದಿನಗಳಿಂದ ಕಾಣೆಯಾಗಿರುವ ವಿಚಾರ ಗೊತ್ತಾಗಿದೆ. ಕೆಲಸಕ್ಕೂಹಾಜರಾಗಿಲ್ಲ.ಇಲವಾಲ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪತ್ತೆಗಾಗಿ ಹುಡುಕಾಟ ನಡೆಯುತ್ತಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>