<p><strong>ಮೈಸೂರು: </strong>ಯುಪಿಎಸ್ಸಿ ಪರೀಕ್ಷೆಯಲ್ಲಿ ಮೈಸೂರಿನ ತಿ.ನರಸೀಪುರ ತಾಲ್ಲೂಕು ಬನ್ನೂರು ಹೋಬಳಿ ಅತ್ತಹಳ್ಳಿ ಗ್ರಾಮದ ವರುಣ್ ಕೆ ಗೌಡ ಮೊದಲ ಪ್ರಯತ್ನದಲ್ಲೇ 528ನೇ ರ್ಯಾಂಕ್ ಪಡೆದುಕೊಂಡಿದ್ದಾರೆ.</p>.<p>ವರುಣ್ ಅವರು ಮೈಸೂರು ವೈದ್ಯಕೀಯ ಕಾಲೇಜಿನಲ್ಲಿ ಕಳೆದ ವರ್ಷ ಎಂಬಿಬಿಎಸ್ ಪೂರೈಸಿದ್ದರು.</p>.<p>‘ಸಮಾಜದ ದೊಡ್ಡ ವರ್ಗದ ಜನರ ಸೇವೆ ಮಾಡಬೇಕು ಎಂಬ ಕನಸು ಇತ್ತು. ಆದ್ದರಿಂದ ಯುಪಿಎಸ್ಸಿ ಪರೀಕ್ಷೆ ಬರೆದೆ. ಮೊದಲ ಪ್ರಯತ್ನದಲ್ಲೇ ರ್ಯಾಂಕ್ ದೊರೆಯುವ ನಿರೀಕ್ಷೆ ಇರಲಿಲ್ಲ’ ಎಂದು ಪ್ರತಿಕ್ರಿಯಿಸಿದರು.</p>.<p>‘ನಮ್ಮದು ಕೃಷಿಕ ಕುಟುಂಬ. ತಂದೆ ಕೃಷಿ ಚಟುವಟಿಕೆ ನೋಡಿಕೊಂಡಿದ್ದಾರೆ. ತಾಯಿ ಗೃಹಿಣಿ. ಪ್ರಿಲಿಮ್ ಮತ್ತು ಮುಖ್ಯ ಪರೀಕ್ಷೆಗೆ ಕೋಚಿಂಗ್ಗೆ ಹೋಗಿಲ್ಲ. ಮನೆಯಲ್ಲೇ ಕುಳಿತು ಓದಿದೆ. ಸಂದರ್ಶನ ಎದುರಿಸಲು ಅಲ್ಪ ಮಾರ್ಗದರ್ಶನ ಪಡೆದುಕೊಂಡೆ’ ಎಂದರು.</p>.<p><strong>636ನೇ ರ್ಯಾಂಕ್:</strong>ಮೈಸೂರಿನ ವಿಜಯಶ್ರೀಪುರದ ಪ್ರಜ್ವಲ್ ಅವರು 636ನೇ ರ್ಯಾಂಕ್ ಪಡೆದುಕೊಂಡಿದ್ದಾರೆ. ಮೈಸೂರು ಎನ್ಐಇ ಕಾಲೇಜಿನಲ್ಲಿ ಬಿಇ (ಮೆಕ್ಯಾನಿಕಲ್) ಪೂರೈಸಿರುವ ಪ್ರಜ್ವಲ್ ಅವರು ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಡಿಸೈನ್ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದಾರೆ.</p>.<p>ನಾಲ್ಕನೇ ಪ್ರಯತ್ನದಲ್ಲಿ ಇವರಿಗೆ ಯಶಸ್ಸು ಲಭಿಸಿದೆ. ಕಳೆದ ಬಾರಿ ಸಂದರ್ಶನಕ್ಕೆ ಆಯ್ಕೆಯಾಗಿದ್ದರೂ, ರ್ಯಾಂಕ್ ಲಭಿಸಿರಲಿಲ್ಲ.</p>.<p>‘ಕೆಳ ಮಧ್ಯಮ ವರ್ಗದ ಕುಟುಂಬದಿಂದ ಬಂದರೂ ಕಷ್ಟಪಟ್ಟು ಓದಿದೆ. ತಂದೆ ಹೋಟೆಲ್ನಲ್ಲಿ ಸೂಪರ್ವೈಸರ್ ಆಗಿ ಕೆಲಸ ಮಾಡುತ್ತಿದ್ದರು. ತಾಯಿ ಗೃಹಿಣಿ. ಕುಟುಂಬದ ಆರ್ಥಿಕ ಸ್ಥಿತಿ ಚೆನ್ನಾಗಿರಲಿಲ್ಲ. ಆದ್ದರಿಂದ ಕೆಲಸದ ನಡುವೆಯೂ ಓದಿಕೊಂಡು ಪರೀಕ್ಷೆ ಬರೆಯಬೇಕಾಗಿತ್ತು. ಈ ಸಾಧನೆ ಖುಷಿ ನೀಡಿದೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು: </strong>ಯುಪಿಎಸ್ಸಿ ಪರೀಕ್ಷೆಯಲ್ಲಿ ಮೈಸೂರಿನ ತಿ.ನರಸೀಪುರ ತಾಲ್ಲೂಕು ಬನ್ನೂರು ಹೋಬಳಿ ಅತ್ತಹಳ್ಳಿ ಗ್ರಾಮದ ವರುಣ್ ಕೆ ಗೌಡ ಮೊದಲ ಪ್ರಯತ್ನದಲ್ಲೇ 528ನೇ ರ್ಯಾಂಕ್ ಪಡೆದುಕೊಂಡಿದ್ದಾರೆ.</p>.<p>ವರುಣ್ ಅವರು ಮೈಸೂರು ವೈದ್ಯಕೀಯ ಕಾಲೇಜಿನಲ್ಲಿ ಕಳೆದ ವರ್ಷ ಎಂಬಿಬಿಎಸ್ ಪೂರೈಸಿದ್ದರು.</p>.<p>‘ಸಮಾಜದ ದೊಡ್ಡ ವರ್ಗದ ಜನರ ಸೇವೆ ಮಾಡಬೇಕು ಎಂಬ ಕನಸು ಇತ್ತು. ಆದ್ದರಿಂದ ಯುಪಿಎಸ್ಸಿ ಪರೀಕ್ಷೆ ಬರೆದೆ. ಮೊದಲ ಪ್ರಯತ್ನದಲ್ಲೇ ರ್ಯಾಂಕ್ ದೊರೆಯುವ ನಿರೀಕ್ಷೆ ಇರಲಿಲ್ಲ’ ಎಂದು ಪ್ರತಿಕ್ರಿಯಿಸಿದರು.</p>.<p>‘ನಮ್ಮದು ಕೃಷಿಕ ಕುಟುಂಬ. ತಂದೆ ಕೃಷಿ ಚಟುವಟಿಕೆ ನೋಡಿಕೊಂಡಿದ್ದಾರೆ. ತಾಯಿ ಗೃಹಿಣಿ. ಪ್ರಿಲಿಮ್ ಮತ್ತು ಮುಖ್ಯ ಪರೀಕ್ಷೆಗೆ ಕೋಚಿಂಗ್ಗೆ ಹೋಗಿಲ್ಲ. ಮನೆಯಲ್ಲೇ ಕುಳಿತು ಓದಿದೆ. ಸಂದರ್ಶನ ಎದುರಿಸಲು ಅಲ್ಪ ಮಾರ್ಗದರ್ಶನ ಪಡೆದುಕೊಂಡೆ’ ಎಂದರು.</p>.<p><strong>636ನೇ ರ್ಯಾಂಕ್:</strong>ಮೈಸೂರಿನ ವಿಜಯಶ್ರೀಪುರದ ಪ್ರಜ್ವಲ್ ಅವರು 636ನೇ ರ್ಯಾಂಕ್ ಪಡೆದುಕೊಂಡಿದ್ದಾರೆ. ಮೈಸೂರು ಎನ್ಐಇ ಕಾಲೇಜಿನಲ್ಲಿ ಬಿಇ (ಮೆಕ್ಯಾನಿಕಲ್) ಪೂರೈಸಿರುವ ಪ್ರಜ್ವಲ್ ಅವರು ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಡಿಸೈನ್ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದಾರೆ.</p>.<p>ನಾಲ್ಕನೇ ಪ್ರಯತ್ನದಲ್ಲಿ ಇವರಿಗೆ ಯಶಸ್ಸು ಲಭಿಸಿದೆ. ಕಳೆದ ಬಾರಿ ಸಂದರ್ಶನಕ್ಕೆ ಆಯ್ಕೆಯಾಗಿದ್ದರೂ, ರ್ಯಾಂಕ್ ಲಭಿಸಿರಲಿಲ್ಲ.</p>.<p>‘ಕೆಳ ಮಧ್ಯಮ ವರ್ಗದ ಕುಟುಂಬದಿಂದ ಬಂದರೂ ಕಷ್ಟಪಟ್ಟು ಓದಿದೆ. ತಂದೆ ಹೋಟೆಲ್ನಲ್ಲಿ ಸೂಪರ್ವೈಸರ್ ಆಗಿ ಕೆಲಸ ಮಾಡುತ್ತಿದ್ದರು. ತಾಯಿ ಗೃಹಿಣಿ. ಕುಟುಂಬದ ಆರ್ಥಿಕ ಸ್ಥಿತಿ ಚೆನ್ನಾಗಿರಲಿಲ್ಲ. ಆದ್ದರಿಂದ ಕೆಲಸದ ನಡುವೆಯೂ ಓದಿಕೊಂಡು ಪರೀಕ್ಷೆ ಬರೆಯಬೇಕಾಗಿತ್ತು. ಈ ಸಾಧನೆ ಖುಷಿ ನೀಡಿದೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>