ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರದ ಪತನಕ್ಕೆ ಮೂಲ ಕಾರಣವಾದ ಬಿಜೆಪಿ, ಅಧಿಕಾರದ ಗದ್ದುಗೆ ಏರಿದ ಬಳಿಕ ಜನಸಾಮಾನ್ಯರಿಗೆ ಹೊಸ ಯೋಜನೆಗಳ ಕೊಡುಗೆ ನೀಡಲಿಲ್ಲ. ರಾಜ್ಯದಲ್ಲಿ ಎದುರಾದ ಪ್ರಾಕೃತಿಕ ವಿಕೋಪವನ್ನೂ ಸಮರ್ಥವಾಗಿ ನಿಭಾಯಿಸಲಿಲ್ಲ. ಸಂತ್ರಸ್ತರಿಗೆ ತಾತ್ಕಾಲಿಕವಾಗಿ ₹ 10 ಸಾವಿರ ನೀಡಲಾಗಿದೆ. ಉಳಿದಂತೆ, ಮನೆ ಕಳೆದುಕೊಂಡವರಿಗೆ ₹5 ಲಕ್ಷ ಪರಿಹಾರ ಈವರೆಗೂ ಸಿಕ್ಕಿಲ್ಲ. ಉಪಚುನಾವಣೆಯಲ್ಲಿ ಜನರ ಎದುರು ಹೋಗಲು ಮುಖ್ಯಮಂತ್ರಿ ಹೆದರಿದ್ದಾರೆ’ ಎಂದು ದೂರಿದರು.