ಮೈಸೂರು: ‘ಚಡ್ಡಿ ಸೂಕ್ಷ್ಮವಾದ ವಿಚಾರ. ಇಂಥ ವಿಚಾರಗಳ ಬಗ್ಗೆ ಮಾತನಾಡಬಾರದೆಂದು ಹೈಕಮಾಂಡ್ನಿಂದ ಆದೇಶ ಬಂದಿದೆ’ ಎಂದು ವಸತಿ ಸಚಿವ ವಿ.ಸೋಮಣ್ಣ ತಿಳಿಸಿದರು.
ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ದೇಶಕ್ಕೆ ಆರ್ಎಸ್ಎಸ್ ಕೊಡುಗೆ ಏನೆಂಬುದು ಎಲ್ಲರಿಗೂ ಗೊತ್ತಿದೆ. ಕೆಲವರ ನಂಬಿಕೆ, ಆಚರಣೆಗಳಿಗೆ ಅವಮಾನ ಮಾಡುವುದು ಸರಿಯಲ್ಲ. ಇವು ಬೀದಿ ಜಗಳವಾಗಬಾರದು, ಸುಖಾಂತ್ಯಗೊಳ್ಳಬೇಕು’ ಎಂದರು.
‘ಯಡಿಯೂರಪ್ಪ ಹಾಗೂ ಸಿದ್ದರಾಮಯ್ಯ ಭೇಟಿ ಸೌಹಾರ್ದಯುತ ಭೇಟಿ. ಅದಕ್ಕೆ ಬೇರೆ ಅರ್ಥ ಕಲ್ಪಿಸುವುದು ಸರಿಯಲ್ಲ. ಇಬ್ಬರು ಆಕಸ್ಮಿಕವಾಗಿ ಭೇಟಿಯೇ ಆಗಬಾರದೇ? ಅದನ್ನು ಯಾರು ವಿಡಿಯೊ ಮಾಡಿ ಹೊರಗಡೆ ಬಿಟ್ಟಿದ್ದಾರೋ ಗೊತ್ತಿಲ್ಲ. ಸಿದ್ದರಾಮಯ್ಯ, ಯಡಿಯೂರಪ್ಪ ರಾಜ್ಯಸಭೆ ಚುನಾವಣೆ ವಿಚಾರವಾಗಿ ಮಾತನಾಡಿಲ್ಲ’ ಎಂದು ಸ್ಪಷ್ಟಪಡಿಸಿದರು.