ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಡಿಯೂರಪ್ಪ ಕೊಟ್ಟ ಮಾತಿನಂತೆ ನಡೆದುಕೊಳ್ಳಬೇಕು: ಶ್ರೀನಿವಾಸಪ್ರಸಾದ್‌

Last Updated 15 ಜೂನ್ 2020, 12:37 IST
ಅಕ್ಷರ ಗಾತ್ರ

ಮೈಸೂರು: ‘ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ, ಕೊಟ್ಟ ಮಾತಿನಂತೆ ನಡೆದುಕೊಳ್ಳಬೇಕು. ಎಚ್‌.ವಿಶ್ವನಾಥ್ ಕೂಡ ಅದನ್ನು ಮತ್ತೆ ನೆನಪಿಸಬೇಕು’ ಎಂದು ಬಿಜೆಪಿ ಸಂಸದ ವಿ.ಶ್ರೀನಿವಾಸಪ್ರಸಾದ್‌ ಸೋಮವಾರ ಇಲ್ಲಿ ಹೇಳಿದರು.

‘ವಿಶ್ವನಾಥ್‌ ನನ್ನನ್ನು ನಂಬಿ ಬಂದಿದ್ದಾರೆ. ಬಿಜೆಪಿ ಸೇರುವ ಮುನ್ನವೇ, ಯಡಿಯೂರಪ್ಪ ಬಳಿ ನಾನೇ ಅವರನ್ನು ಕಳುಹಿಸಿಕೊಟ್ಟಿದ್ದೆ. ಆಗಲೇ ಇಬ್ಬರೂ ಮಾತನಾಡಿ ಒಪ್ಪಂದ ಮಾಡಿಕೊಂಡಿದ್ದಾರೆ’ ಎಂದರು.

‘ಮುಂದಿನ ಮೂರು ವರ್ಷ ಯಡಿಯೂರಪ್ಪ ನೇತೃತ್ವದಲ್ಲೇ ಬಿಜೆಪಿ ಸರ್ಕಾರ ಸುಭದ್ರವಾಗಿ ಮುಂದುವರಿಯಲಿದೆ’ ಎಂದು ಹೇಳಿದರು.

ಎಚ್‌.ಡಿ.ದೇವೇಗೌಡ ಅವರು ರಾಜ್ಯಸಭೆಗೆ ಆಯ್ಕೆಯಾಗಿರುವ ಬಗ್ಗೆ, ‘ದೇವೇಗೌಡರ ವಿಷಯ ಪ್ರಸ್ತಾಪ ಮಾಡಬೇಡಿ. ಅವರ ಹೆಸರು ಹೇಳುವುದಕ್ಕೂ ಇಷ್ಟಪಡುವುದಿಲ್ಲ. ಸುಮ್ಮನೇ ವಿವಾದವಾಗುತ್ತದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT