ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚುನಾವಣಾ ಆಯೋಗ ನಿದ್ರೆಯಲ್ಲಿದೆಯೆಂದು ಮಲಗಿ ಪ್ರತಿಭಟಿಸಿದ ವಾಟಾಳ್ ನಾಗರಾಜ್

Last Updated 9 ಡಿಸೆಂಬರ್ 2021, 8:28 IST
ಅಕ್ಷರ ಗಾತ್ರ

ಮೈಸೂರು: ವಿಧಾನಪರಿಷತ್ ಚುನಾವಣೆಯಲ್ಲಿ ಭಾರಿ ಪ್ರಮಾಣದಲ್ಲಿ ಭ್ರಷ್ಟಾಚಾರ ನಡೆಯುತ್ತಿದ್ದು, ಚುನಾವಣಾ ಆಯೋಗ ನಿದ್ರಾವಸ್ಥೆಯಲ್ಲಿದೆ‌ ಎಂದು ಕನ್ನಡ ಚಳವಳಿ ವಾಟಾಳ್ ಪಕ್ಷದ ವಾಟಾಳ್ ನಾಗರಾಜ್ ಆರೋಪಿಸಿದರು‌.

ಇಲ್ಲಿನ ಜಯಚಾಮರಾಜ ಒಡೆಯರ್ (ಹಾರ್ಡಿಂಜ್) ವೃತ್ತದಲ್ಲಿ ಅವರು ಗುರುವಾರ ಮಲಗಿ ಪ್ರತಿಭಟನೆ ನಡೆಸಿದರು‌.

ಭ್ರಷ್ಟಾಚಾರವನ್ನು ತಡೆಯುವಲ್ಲಿ ಅಯೋಗ ಸಂಪೂರ್ಣವಾಗಿ ವಿಫಲವಾಗಿದೆ ಎಂದು ದೂರಿದ ಅವರು ವಿಧಾನಪರಿಷತ್ ಚುನಾವಣೆ ಭ್ರಷ್ಟರ ಕೂಟ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಚಿನ್ನದ ನಾಣ್ಯ, ಬೆಳ್ಳಿ ನಾಣ್ಯ ಹಣ ಹೀಗೆ ಎಲ್ಲವನ್ನೂ ಹಂಚಿಕೆ ಮಾಡಲಾಗುತ್ತಿದೆ. ಒಬ್ಬಬ್ಬ ಗ್ರಾಮ ಪಂಚಾಯಿತಿ ಸದಸ್ಯರಿಗೂ ಒಂದು ಲಕ್ಷದಷ್ಟು ಹಣ ಬರುತ್ತಿದೆ. ಭ್ರಷ್ಟಾಚಾರಕ್ಕೆ ಕಡಿವಾಣ ಹಾಕದಿದ್ದರೆ ವಿಧಾನಪರಿಷತ್ ಚುನಾವಣೆಯನ್ನು ರದ್ದುಗೊಳಿಸಬೇಕು ಎಂದು ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT