ಈ ಯೋಜನೆ ಜಾರಿಯಾಗದೇ ಇರುವುದಕ್ಕೆ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಮೂರೂ ಪಕ್ಷಗಳು ಕಾರಣವಾಗಿವೆ. ಯಡಿಯೂರಪ್ಪ ಅವರು ಈ ಯೋಜನೆ ಕುರಿತು ತಮಿಳುನಾಡಿನ ಮುಖ್ಯಮಂತ್ರಿ ಸ್ಟಾಲಿನ್ ಅವರಿಗೆ ಪತ್ರ ಬರೆದಿದ್ದು ಸರಿಯಲ್ಲ ಎಂದು ಖಂಡಿಸಿದ ಅವರು, ಜುಲೈ 11ರಂದು ರಾಮನಗರದಲ್ಲಿ ಹೆದ್ದಾರಿ ತಡೆ ಮಾಡುವುದಾಗಿ ತಿಳಿಸಿದರು.