<p><strong>ಮೈಸೂರು: </strong>ಬಂಡೀಪುರದಲ್ಲಿ ರಾತ್ರಿ ಸಂಚಾರ ನಿಷೇಧ ಮುಂದುವರಿಸಬೇಕು ಹಾಗೂ ಸಂಸದ ರಾಹುಲ್ಗಾಂಧಿ ಅವರನ್ನು ರಾಜ್ಯದಲ್ಲಿ ಬಹಿಷ್ಕರಿಸಬೇಕು ಎಂದು ಆಗ್ರಹಿಸಿ ಕನ್ನಡ ಚಳವಳಿ ವಾಟಾಳ್ ಪಕ್ಷದ ವಾಟಾಳ್ ನಾಗರಾಜ್ ಶನಿವಾರ ಇಲ್ಲಿನ ರೈಲು ನಿಲ್ದಾಣದ ಮುಂದೆ ಪ್ರತಿಭಟನೆ ನಡೆಸಿದರು.</p>.<p>ಸುಪ್ರೀಂಕೋರ್ಟ್ನ ಸ್ಪಷ್ಟ ಆದೇಶ ಇದ್ದಾಗ್ಯೂ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ರಾಹುಲ್ ಗಾಂಧಿ ಹೇಳಿರುವುದು ಸರಿಯಲ್ಲ ಎಂದು ಖಂಡಿಸಿದರು.</p>.<p><strong>ಇದನ್ನೂ ಓದಿ...<a href="https://www.prajavani.net/district/chamarajanagara/chamarajanagara-671346.html" target="_blank">ಬಂಡೀಪುರ: ರಾತ್ರಿ ಸಂಚಾರ ನಿಷೇಧ ತೆರವುಗೊಳಿಸದಂತೆ ಮನವಿ -ವಾಟಾಳ್ ಪ್ರತಿಭಟನೆ</a></strong></p>.<p>ಬಂಡೀಪುರ ಕರ್ನಾಟಕದ ವನ್ಯ ಸಂಪತ್ತು. ಇದನ್ನು ರಕ್ಷಿಸಬೇಕಾದ್ದು ಎಲ್ಲರ ಹೊಣೆ. ಆದರೆ, ಮರದ ಮಾಫಿಯಾ ರಾತ್ರಿ ಸಂಚಾರಕ್ಕೆ ಅವಕಾಶ ಮಾಡಿಕೊಡುವಂತೆ ಇನ್ನಿಲ್ಲದ ಕಸರತ್ತು ನಡೆಸುತ್ತಿದೆ. ಇದಕ್ಕೆ ಕೇರಳ ಸರ್ಕಾರ ಸಹ ಸ್ಪಂದಿಸುತ್ತಿರುವುದು ದುರದೃಷ್ಟಕರ ಎಂದು ಕಿಡಿಕಾರಿದರು.</p>.<p>ಬಂಡೀಪುರದಲ್ಲಿ ಹೊಸ ರಸ್ತೆ ನಿರ್ಮಿಸಲು ಕೇಂದ್ರ ಸರ್ಕಾರ ಸಮಿತಿ ರಚಿಸಬಾರದು. ಅಲ್ಲಿನ ವನ್ಯಜೀವಿಗಳನ್ನು ಉಳಿಸುವ ಕೆಲಸ ಮಾಡಬೇಕೇ ಹೊರತು ಅಳಿಸುವ ಕೆಲಸ ಮಾಡಬಾರದು ಎಂದು ಆಗ್ರಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು: </strong>ಬಂಡೀಪುರದಲ್ಲಿ ರಾತ್ರಿ ಸಂಚಾರ ನಿಷೇಧ ಮುಂದುವರಿಸಬೇಕು ಹಾಗೂ ಸಂಸದ ರಾಹುಲ್ಗಾಂಧಿ ಅವರನ್ನು ರಾಜ್ಯದಲ್ಲಿ ಬಹಿಷ್ಕರಿಸಬೇಕು ಎಂದು ಆಗ್ರಹಿಸಿ ಕನ್ನಡ ಚಳವಳಿ ವಾಟಾಳ್ ಪಕ್ಷದ ವಾಟಾಳ್ ನಾಗರಾಜ್ ಶನಿವಾರ ಇಲ್ಲಿನ ರೈಲು ನಿಲ್ದಾಣದ ಮುಂದೆ ಪ್ರತಿಭಟನೆ ನಡೆಸಿದರು.</p>.<p>ಸುಪ್ರೀಂಕೋರ್ಟ್ನ ಸ್ಪಷ್ಟ ಆದೇಶ ಇದ್ದಾಗ್ಯೂ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ರಾಹುಲ್ ಗಾಂಧಿ ಹೇಳಿರುವುದು ಸರಿಯಲ್ಲ ಎಂದು ಖಂಡಿಸಿದರು.</p>.<p><strong>ಇದನ್ನೂ ಓದಿ...<a href="https://www.prajavani.net/district/chamarajanagara/chamarajanagara-671346.html" target="_blank">ಬಂಡೀಪುರ: ರಾತ್ರಿ ಸಂಚಾರ ನಿಷೇಧ ತೆರವುಗೊಳಿಸದಂತೆ ಮನವಿ -ವಾಟಾಳ್ ಪ್ರತಿಭಟನೆ</a></strong></p>.<p>ಬಂಡೀಪುರ ಕರ್ನಾಟಕದ ವನ್ಯ ಸಂಪತ್ತು. ಇದನ್ನು ರಕ್ಷಿಸಬೇಕಾದ್ದು ಎಲ್ಲರ ಹೊಣೆ. ಆದರೆ, ಮರದ ಮಾಫಿಯಾ ರಾತ್ರಿ ಸಂಚಾರಕ್ಕೆ ಅವಕಾಶ ಮಾಡಿಕೊಡುವಂತೆ ಇನ್ನಿಲ್ಲದ ಕಸರತ್ತು ನಡೆಸುತ್ತಿದೆ. ಇದಕ್ಕೆ ಕೇರಳ ಸರ್ಕಾರ ಸಹ ಸ್ಪಂದಿಸುತ್ತಿರುವುದು ದುರದೃಷ್ಟಕರ ಎಂದು ಕಿಡಿಕಾರಿದರು.</p>.<p>ಬಂಡೀಪುರದಲ್ಲಿ ಹೊಸ ರಸ್ತೆ ನಿರ್ಮಿಸಲು ಕೇಂದ್ರ ಸರ್ಕಾರ ಸಮಿತಿ ರಚಿಸಬಾರದು. ಅಲ್ಲಿನ ವನ್ಯಜೀವಿಗಳನ್ನು ಉಳಿಸುವ ಕೆಲಸ ಮಾಡಬೇಕೇ ಹೊರತು ಅಳಿಸುವ ಕೆಲಸ ಮಾಡಬಾರದು ಎಂದು ಆಗ್ರಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>