ಈ ವೇಳೆ ಮಾತನಾಡಿದ ಅವರು, ‘ರಾಜಕಾರಣಿಗಳು ಭಾಗವಹಿಸುವ ಕಾರ್ಯಕ್ರಮದಲ್ಲಿ ನೂರಾರು ಮಂದಿ ಭಾಗವಹಿಸುತ್ತಾರೆ. ಇಲ್ಲಿ ಹರಡದ ಕೊರೊನಾ ವೈರಸ್, ಜಾತ್ರೆಯಲ್ಲಿ ಮಾತ್ರ ಹರಡುತ್ತದೆ ಎಂಬುದು ತಪ್ಪುಕಲ್ಪನೆ. ಯಾವುದೇ ಕಾರಣದಿಂದಲೂ ಜಾತ್ರೆಯಲ್ಲಿ ಸೋಂಕು ಹರಡುವುದಿಲ್ಲ. ಹೀಗಾಗಿ, ಕೂಡಲೇ ಜಿಲ್ಲಾಡಳಿತ ನಿರ್ಬಂಧವನ್ನು ತೆರವುಗೊಳಿಸಿ ರಥೋತ್ಸವಕ್ಕೆ ಅನುಮತಿ ನೀಡಬೇಕು’ ಎಂದು ಹೇಳಿದರು.